ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ ಈ ಸ್ಥಳದಲ್ಲಿ ಪಕ್ಕಾ ಸೂರಿಲ್ಲದೇ ಬದುಕುತ್ತಿದ್ದಾರೆ. ಈಗಲಾದರೂ ಪಕ್ಕಾ ಸೂರು ದೊರಕಿ ಸರಕಾರದ ಸವಲತ್ತು ವೃದ್ದ ದಂಪತಿಗೆ ದೊರೆಯುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.
ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ ಅವರ ಕುಟುಂಬಕ್ಕೆ 70 ವರ್ಷ ಹಿಂದೆ ಸರಕಾರದಿಂದ ಮಂಜೂರಾದ 4:40 ಎಕ್ರೆ ಸ್ಥಳ ಇತ್ತು. ಅದು ಮಾಣಿಕ ಅವರ ಸಹೋದನ ಹೆಸರಿನಲ್ಲಿದೆ. ಸಹೋದರ ಈಗಾಗಲೇ ಮೃತಪಟ್ಟಿದ್ದು ಅವರ ಮಕ್ಕಳು ಇದೇ ಸ್ಥಳದ ಇನ್ನೊಂದು ಕಡೆ ಕಚ್ಚಾ ಸೂರಿನಲ್ಲಿದ್ದಾರೆ. ತೀರಾ ಕಡುಬಡವರಾದ ಮಾಣಿಕ ಅವರಿಗೆ ಒಬ್ಬ ಪುತ್ರನಿದ್ದು ಆತ ಉದ್ಯೋಗದ ನಿಮಿತ್ತ ದೂರದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಇವರು ಜೀವನೋಪಾಯಕ್ಕೆ ಅಡಕೆ ಸುಲಿಯುವ ಮುಂತಾದ ಸಣ್ಣಪುಟ್ಟ ಕಾಯಕ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೃದ್ದಾಪ್ಯದಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿದ್ದು ಇವರ ಪತ್ನಿಗೆ ಇತ್ತಿಚೆಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಾಗಿದೆ. ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಅತ್ತಿತ್ತ ಓಡಾಡಿದ್ದು ಮಾತ್ರ. ಯಾವುದೆ ಫಲ ನೀಡಿಲ್ಲ. ಹೀಗಾಗಿ ಈ ಕುಟುಂಬಕ್ಕೆ ಸೌಲಭ್ಯ ಸಿಗುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…