Advertisement
ಸುದ್ದಿಗಳು

ಈ ವೃದ್ದರಿಗೆ ಬೇಕಿದೆ “ಆಸರೆ”ಯ ಊರುಗೋಲು…

Share

ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ ಈ ಸ್ಥಳದಲ್ಲಿ ಪಕ್ಕಾ ಸೂರಿಲ್ಲದೇ ಬದುಕುತ್ತಿದ್ದಾರೆ. ಈಗಲಾದರೂ ಪಕ್ಕಾ ಸೂರು ದೊರಕಿ ಸರಕಾರದ ಸವಲತ್ತು ವೃದ್ದ  ದಂಪತಿಗೆ ದೊರೆಯುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.

ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ ಅವರ ಕುಟುಂಬಕ್ಕೆ  70 ವರ್ಷ ಹಿಂದೆ ಸರಕಾರದಿಂದ ಮಂಜೂರಾದ 4:40 ಎಕ್ರೆ ಸ್ಥಳ ಇತ್ತು. ಅದು ಮಾಣಿಕ ಅವರ ಸಹೋದನ  ಹೆಸರಿನಲ್ಲಿದೆ. ಸಹೋದರ ಈಗಾಗಲೇ ಮೃತಪಟ್ಟಿದ್ದು ಅವರ ಮಕ್ಕಳು ಇದೇ ಸ್ಥಳದ ಇನ್ನೊಂದು ಕಡೆ ಕಚ್ಚಾ ಸೂರಿನಲ್ಲಿದ್ದಾರೆ. ತೀರಾ ಕಡುಬಡವರಾದ ಮಾಣಿಕ ಅವರಿಗೆ ಒಬ್ಬ ಪುತ್ರನಿದ್ದು ಆತ ಉದ್ಯೋಗದ ನಿಮಿತ್ತ  ದೂರದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಇವರು ಜೀವನೋಪಾಯಕ್ಕೆ ಅಡಕೆ ಸುಲಿಯುವ ಮುಂತಾದ ಸಣ್ಣಪುಟ್ಟ ಕಾಯಕ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೃದ್ದಾಪ್ಯದಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿದ್ದು ಇವರ ಪತ್ನಿಗೆ ಇತ್ತಿಚೆಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಾಗಿದೆ. ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಅತ್ತಿತ್ತ ಓಡಾಡಿದ್ದು ಮಾತ್ರ. ಯಾವುದೆ ಫಲ ನೀಡಿಲ್ಲ. ಹೀಗಾಗಿ ಈ ಕುಟುಂಬಕ್ಕೆ ಸೌಲಭ್ಯ ಸಿಗುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

12 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

14 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

19 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 day ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 days ago