Advertisement
MIRROR FOCUS

ನಮ್ಮ ಹೆಮ್ಮೆಯ ವೀರಯೋಧ ಚೇತರಿಸಿಕೊಳ್ಳುತ್ತಿದ್ದಾರೆ

Share

ಮಡಿಕೇರಿ  : ತಲೆಗೆ ಗುಂಡು ಬಿದ್ದರೂ ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಬದುಕಿ ಬಂದ ಕೊಡಗಿನ ವೀರಯೋಧ ಎಚ್.ಎನ್.ಮಹೇಶ್. ಕಿರಿಯ ವಯಸ್ಸಿನಲ್ಲೇ ಶೌರ್ಯ ಚಕ್ರ ಪ್ರಶಸ್ತಿ ಪಡೆದ,  ಸಾಧನೆ ಮಾಡಿರುವ ಕೊಡಗಿನ ವೀರಯೋಧ ಎಚ್.ಎನ್.ಮಹೇಶ್ ಅವರು ಉಗ್ರರ ವಿರುದ್ಧ ನಡೆದ ಮತ್ತೊಂದು ಸಮರದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಗೆದ್ದು ಬಂದಿದ್ದಾರೆ. ಉಗ್ರರ ಗುಂಡೇಟಿನಿಂದ ಗಾಯಗೊಂಡಿದ್ದ ಅವರು ಇದೀಗ ಚೇತರಿಸಿಕೊಂಡಿದ್ದಾರೆ.

ರಜೆಯ ನಿಮಿತ್ತ  ಊರಿಗೆ ಬಂದಿದ್ದ ಮಹೇಶ್ ಮೇ 15 ರಂದು ಕರ್ತವ್ಯಕ್ಕೆ ಮರಳಿದ್ದರು. ಮೇ 29 ರಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‍ನಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧರಿಸಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಉಗ್ರರು ಹಾರಿಸಿದ ಗುಂಡು ಮಹೇಶ್ ಅವರ ತಲೆಗೆ ಬಿದ್ದಿತ್ತು. ತಲೆಗೆ ಗುಂಟೇಟು ಬಿದ್ದರೂ ಹಿಂಜರಿಯದ ಮಹೇಶ್ ಉಗ್ರರತ್ತ ನಿರಂತರವಾಗಿ ಗುಂಡು ಹಾರಿಸಿದ್ದರು. ಇವರೊಂದಿಗಿದ್ದ ಇತರ ಸೈನಿಕರು ಗಾಯಗೊಂಡಿದ್ದ ಮಹೇಶ್‍ರನ್ನು ಹಿಂದಕ್ಕೆ ಎಳೆದುಕೊಂಡು ಉಗ್ರರನ್ನು ಕೊಂದಿದ್ದರು. ಬಳಿಕ ಜೈ ಹಿಂದ್ ಎಂದಿದ್ದರು.

ಗುಂಡಿನ ದಾಳಿಯ ಸಂದರ್ಭ ಉಗ್ರರು ಹಾರಿಸಿದ್ದ ಗುಂಡು ಬಲಭಾಗದ ಕಿವಿಯ ಹತ್ತಿರ ಒಳಹೊಕ್ಕು ದವಡೆಯ ಮೂಳೆಯನ್ನು ಸೀಳಿಕೊಂಡು ಮೂಗಿನ ಭಾಗದಿಂದ ಹೊರಬಂದಿತ್ತು. ಗುಂಡೇಟಿನಿಂಗ ಗಾಯವಾಗಿರುವ ಮುಖದ ಭಾಗಕ್ಕೆ 50 ಹೊಲಿಗೆ ಹಾಕಲಾಗಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಮಹೇಶ್ ಅವರನ್ನು ಚಂಡೀಗಢದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಗೊಂಡಿದ್ದ ಮಹೇಶ್ ಕೋಮಾಗೆ ಜಾರಿದ್ದರು. ಹಲವು ದಿನಗಳ ಚಿಕಿತ್ಸೆಯ ನಂತರ ಅವರು ಈಗ ಚೇತರಿಸಿಕೊಂಡಿದ್ದಾರೆ.

ಈ ಹಿಂದೆಯೂ ಉಗ್ರರ ವಿರುದ್ದ ನಡೆದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಹೆಚ್.ಎನ್.ಮಹೇಶ್ ಇಲ್ಲಿಯವರೆಗೆ ಒಟ್ಟು 8 ಮಂದಿ ಉಗ್ರರನ್ನು ಕೊಂದು ಹಾಕಿದ್ದಾರೆ. 2018ರ ಆಗಸ್ಟ್ ತಿಂಗಳಲ್ಲಿ ಶೋಫಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರ ವಿರುದ್ದ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೋಯ್ಬದ ಇಬ್ಬರು ಉಗ್ರವಾದಿಗಳನ್ನು ಕೊಂದು ಹಾಕಿದ್ದಲ್ಲದೇ, ಮತ್ತೋರ್ವನನ್ನು ಗಂಭೀರವಾಗಿ ಗಾಯಗೊಳಿಸಿದ್ದರು. ಭಯೋತ್ಪಾದಕರ ವಿರುದ್ದ ನಡೆಸಲಾದ ಎನ್‍ಕೌಂಟರ್ ಗಳಲ್ಲಿ ದೇಶಭಕ್ತಿ ಮತ್ತು ಅಪ್ರತಿಮ ಸಾಹಸ ಪ್ರದರ್ಶಿಸಿರುವ ಮಹೇಶ್ ಅವರಿಗೆ ರಾಷ್ಟ್ರಪತಿಗಳು ಶೌರ್ಯಚಕ್ರ ನೀಡಿ ಗೌರವಿಸಿದ್ದರು.

ಅವರಿಗೆ ನಮ್ಮದೊಂದು ಸಲಾಂ …..  ಜೈ ಹಿಂದ್……

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

3 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

16 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

20 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago