Advertisement
MIRROR FOCUS

ನಮ್ಮ ಹೆಮ್ಮೆಯ ವೀರಯೋಧ ಚೇತರಿಸಿಕೊಳ್ಳುತ್ತಿದ್ದಾರೆ

Share

ಮಡಿಕೇರಿ  : ತಲೆಗೆ ಗುಂಡು ಬಿದ್ದರೂ ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಬದುಕಿ ಬಂದ ಕೊಡಗಿನ ವೀರಯೋಧ ಎಚ್.ಎನ್.ಮಹೇಶ್. ಕಿರಿಯ ವಯಸ್ಸಿನಲ್ಲೇ ಶೌರ್ಯ ಚಕ್ರ ಪ್ರಶಸ್ತಿ ಪಡೆದ,  ಸಾಧನೆ ಮಾಡಿರುವ ಕೊಡಗಿನ ವೀರಯೋಧ ಎಚ್.ಎನ್.ಮಹೇಶ್ ಅವರು ಉಗ್ರರ ವಿರುದ್ಧ ನಡೆದ ಮತ್ತೊಂದು ಸಮರದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಗೆದ್ದು ಬಂದಿದ್ದಾರೆ. ಉಗ್ರರ ಗುಂಡೇಟಿನಿಂದ ಗಾಯಗೊಂಡಿದ್ದ ಅವರು ಇದೀಗ ಚೇತರಿಸಿಕೊಂಡಿದ್ದಾರೆ.

ರಜೆಯ ನಿಮಿತ್ತ  ಊರಿಗೆ ಬಂದಿದ್ದ ಮಹೇಶ್ ಮೇ 15 ರಂದು ಕರ್ತವ್ಯಕ್ಕೆ ಮರಳಿದ್ದರು. ಮೇ 29 ರಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‍ನಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧರಿಸಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಉಗ್ರರು ಹಾರಿಸಿದ ಗುಂಡು ಮಹೇಶ್ ಅವರ ತಲೆಗೆ ಬಿದ್ದಿತ್ತು. ತಲೆಗೆ ಗುಂಟೇಟು ಬಿದ್ದರೂ ಹಿಂಜರಿಯದ ಮಹೇಶ್ ಉಗ್ರರತ್ತ ನಿರಂತರವಾಗಿ ಗುಂಡು ಹಾರಿಸಿದ್ದರು. ಇವರೊಂದಿಗಿದ್ದ ಇತರ ಸೈನಿಕರು ಗಾಯಗೊಂಡಿದ್ದ ಮಹೇಶ್‍ರನ್ನು ಹಿಂದಕ್ಕೆ ಎಳೆದುಕೊಂಡು ಉಗ್ರರನ್ನು ಕೊಂದಿದ್ದರು. ಬಳಿಕ ಜೈ ಹಿಂದ್ ಎಂದಿದ್ದರು.

ಗುಂಡಿನ ದಾಳಿಯ ಸಂದರ್ಭ ಉಗ್ರರು ಹಾರಿಸಿದ್ದ ಗುಂಡು ಬಲಭಾಗದ ಕಿವಿಯ ಹತ್ತಿರ ಒಳಹೊಕ್ಕು ದವಡೆಯ ಮೂಳೆಯನ್ನು ಸೀಳಿಕೊಂಡು ಮೂಗಿನ ಭಾಗದಿಂದ ಹೊರಬಂದಿತ್ತು. ಗುಂಡೇಟಿನಿಂಗ ಗಾಯವಾಗಿರುವ ಮುಖದ ಭಾಗಕ್ಕೆ 50 ಹೊಲಿಗೆ ಹಾಕಲಾಗಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಮಹೇಶ್ ಅವರನ್ನು ಚಂಡೀಗಢದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಗೊಂಡಿದ್ದ ಮಹೇಶ್ ಕೋಮಾಗೆ ಜಾರಿದ್ದರು. ಹಲವು ದಿನಗಳ ಚಿಕಿತ್ಸೆಯ ನಂತರ ಅವರು ಈಗ ಚೇತರಿಸಿಕೊಂಡಿದ್ದಾರೆ.

ಈ ಹಿಂದೆಯೂ ಉಗ್ರರ ವಿರುದ್ದ ನಡೆದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಹೆಚ್.ಎನ್.ಮಹೇಶ್ ಇಲ್ಲಿಯವರೆಗೆ ಒಟ್ಟು 8 ಮಂದಿ ಉಗ್ರರನ್ನು ಕೊಂದು ಹಾಕಿದ್ದಾರೆ. 2018ರ ಆಗಸ್ಟ್ ತಿಂಗಳಲ್ಲಿ ಶೋಫಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರ ವಿರುದ್ದ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೋಯ್ಬದ ಇಬ್ಬರು ಉಗ್ರವಾದಿಗಳನ್ನು ಕೊಂದು ಹಾಕಿದ್ದಲ್ಲದೇ, ಮತ್ತೋರ್ವನನ್ನು ಗಂಭೀರವಾಗಿ ಗಾಯಗೊಳಿಸಿದ್ದರು. ಭಯೋತ್ಪಾದಕರ ವಿರುದ್ದ ನಡೆಸಲಾದ ಎನ್‍ಕೌಂಟರ್ ಗಳಲ್ಲಿ ದೇಶಭಕ್ತಿ ಮತ್ತು ಅಪ್ರತಿಮ ಸಾಹಸ ಪ್ರದರ್ಶಿಸಿರುವ ಮಹೇಶ್ ಅವರಿಗೆ ರಾಷ್ಟ್ರಪತಿಗಳು ಶೌರ್ಯಚಕ್ರ ನೀಡಿ ಗೌರವಿಸಿದ್ದರು.

ಅವರಿಗೆ ನಮ್ಮದೊಂದು ಸಲಾಂ …..  ಜೈ ಹಿಂದ್……

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago