Advertisement
ಮಾಹಿತಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

Share

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿಯ ಕ್ಷೇತ್ರಗಳು: ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್, ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್. ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ ಇರಬೇಕು.
ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಅರ್ಜಿದಾರರು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯು ಫುಡ್ ಕ್ರಾಫ್ಟ್ ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ, ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

5 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

5 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

12 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

13 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

2 days ago