Advertisement
ಮಾಹಿತಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

Share

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿಯ ಕ್ಷೇತ್ರಗಳು: ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್, ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್. ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್. ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ ಇರಬೇಕು.
ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಅರ್ಜಿದಾರರು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯು ಫುಡ್ ಕ್ರಾಫ್ಟ್ ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ, ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

15 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

16 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

20 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

21 hours ago