Advertisement
ಉದ್ಯೋಗ ಮಾಹಿತಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

Share

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೋಟೆಲ್ ಮ್ಯಾನೇಜ್‍ಮೆಂಟ್  ತರಬೇತಿಯ  ಕ್ಷೇತ್ರಗಳು:

ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್,

ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್.

ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ.

ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ  ನೀಡಲಾಗುವುದು.  ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು  ಮತ್ತು  ಪ್ರತಿಷ್ಠಿತ  ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು:  ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯನ್ನು  ಫುಡ್ ಕ್ರಾಫ್ಟ್  ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ,  ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.    

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

17 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago