Advertisement
ಉದ್ಯೋಗ ಮಾಹಿತಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

Share

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೋಟೆಲ್ ಮ್ಯಾನೇಜ್‍ಮೆಂಟ್  ತರಬೇತಿಯ  ಕ್ಷೇತ್ರಗಳು:

Advertisement

ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್,

ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್.

Advertisement

ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

Advertisement

ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ.

Advertisement

ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ  ನೀಡಲಾಗುವುದು.  ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು  ಮತ್ತು  ಪ್ರತಿಷ್ಠಿತ  ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು:  ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯನ್ನು  ಫುಡ್ ಕ್ರಾಫ್ಟ್  ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ,  ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.    

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

10 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

11 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago