Advertisement
ಉದ್ಯೋಗ ಮಾಹಿತಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

Share

ಮಂಗಳೂರು : ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಹೋಟೆಲ್ ಮ್ಯಾನೇಜ್‍ಮೆಂಟ್  ತರಬೇತಿಯ  ಕ್ಷೇತ್ರಗಳು:

Advertisement

ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್,

ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್.

Advertisement

ಫುಡ್ ಅಂಡ್ ಬೆವರೇಜ್ ಸರ್ವೀಸ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 10 ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ಫ್ರೆಂಟ್ ಆಫೀಸ್, ತರಬೇತಿ ಅವಧಿ- 14 ವಾರಗಳು, ವಿದ್ಯಾರ್ಹತೆ 12ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

Advertisement

ಹೌಸ್ ಕೀಪಿಂಗ್, ತರಬೇತಿ ಅವಧಿ – 12 ವಾರಗಳು, ವಿದ್ಯಾರ್ಹತೆ 5ನೇ ತರಗತಿ ಉತ್ತೀರ್ಣ, ರೂ. 1500 ಸ್ಟೈಫಂಡ್.

ತರಬೇತಿ ಪಡೆಯುವ ಅಭ್ಯರ್ಥಿಗಳ ನಿರ್ದಿಷ್ಟ ವಯೋಮಿತಿ 18 ರಿಂದ 35 ವರ್ಷ.

Advertisement

ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ  ನೀಡಲಾಗುವುದು.  ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್ ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣ ಪತ್ರ ನೀಡಲಾಗುವುದು  ಮತ್ತು  ಪ್ರತಿಷ್ಠಿತ  ಹೋಟೆಲ್‍ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು:  ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ. ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‍ನ ಪ್ರತಿಯನ್ನು ಸಲ್ಲಿಸಬೇಕು. ತರಬೇತಿಯನ್ನು  ಫುಡ್ ಕ್ರಾಫ್ಟ್  ಇನ್ಸ್‍ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ,  ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ನ್ನು ಸಂಪರ್ಕಿಸಲು ಮೈಸೂರು, ಫುಡ್ ಕ್ರಾಫ್ಟ್ ಇನ್‍ಸ್ಟಿಟ್ಯೂಟ್, ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.    

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

1 min ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

3 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

4 hours ago

Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |

ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…

6 hours ago