Advertisement
ಸುದ್ದಿಗಳು

ಉಚಿತ ಸಾಮೂಹಿಕ ವಿವಾಹ ನೋಂದಣಿ ಪ್ರಾರಂಭ

Share

ಮಂಗಳೂರು: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಆಯ್ದ ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಕ್ತ ಸಾಲಿನಿಂದ ಜನಸಾಮಾನ್ಯರ ಅನುಕೂಲಕ್ಕಾಗಿ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸರಕಾರದ ಈ ಸಾಮೂಹಿಕ ಉಚಿತ ವಿವಾಹ ಕಾರ್ಯಕ್ರಮದಲ್ಲಿ ಪ್ರತಿ ನವಜೋಡಿಗೆ ಅಗತ್ಯತೆಗನುಗುಣವಾಗಿ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯಕ್ಕಾಗಿ 5 ಸಾವಿರ ರೂ ಗಳನ್ನು ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣಕ್ಕಾಗಿ 10 ಸಾವಿರ ರೂಪಾಯಿಗಳನ್ನು ಮತ್ತು ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು  (ಅಂದಾಜು 8 ಗ್ರಾಂ ತೂಕ) ಒದಗಿಸುತ್ತಿದ್ದು ಅಂದಾಜು ಒಟ್ಟು 55 ಸಾವಿರ ರೂ ಗಳನ್ನು ಸಂಬಂಧಿಸಿದ ಮುಜರಾಯಿ ದೇವಾಲಯದ ವತಿಯಿಂದ ಭರಿಸಲಾಗುವುದು.

ದ.ಕ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬಪ್ಪನಾಡು, ಕದ್ರಿ ಶ್ರೀ ಮಂಜುನಾಥ  ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಒಟ್ಟು 20 ದೇವಸ್ಥಾನಗಳಲ್ಲಿ ಆಸಕ್ತರು ವಧು ವರರ ಮಾಹಿತಿಗಳೊಂದಿಗೆ ಮಾರ್ಚ್ 27ರ ಒಳಗಾಗಿ ನೊಂದಾಯಿಸಿಕೊಳ್ಳಬಹುದು,  ಸಾಮೂಹಿಕ ವಿವಾಹವು ಎಪ್ರಿಲ್ 26 ರಂದು ಆದಿತ್ಯವಾರ ಅಕ್ಷಯತದಿಗೆಯಂದು ಸುಮೂಹೂರ್ತದಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿಯ ಧಾರ್ಮಿಕ ದತ್ತಿ ಇಲಾಖೆಯಿಂದ ಪಡೆಯಬಹುದು ಹಾಗೂ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

3 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

21 hours ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago