Advertisement
ಸುದ್ದಿಗಳು

ಉಚಿತ ಸಾಮೂಹಿಕ ವಿವಾಹ ನೋಂದಣಿ ಪ್ರಾರಂಭ

Share

ಮಂಗಳೂರು: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಆಯ್ದ ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಕ್ತ ಸಾಲಿನಿಂದ ಜನಸಾಮಾನ್ಯರ ಅನುಕೂಲಕ್ಕಾಗಿ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸರಕಾರದ ಈ ಸಾಮೂಹಿಕ ಉಚಿತ ವಿವಾಹ ಕಾರ್ಯಕ್ರಮದಲ್ಲಿ ಪ್ರತಿ ನವಜೋಡಿಗೆ ಅಗತ್ಯತೆಗನುಗುಣವಾಗಿ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯಕ್ಕಾಗಿ 5 ಸಾವಿರ ರೂ ಗಳನ್ನು ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣಕ್ಕಾಗಿ 10 ಸಾವಿರ ರೂಪಾಯಿಗಳನ್ನು ಮತ್ತು ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು  (ಅಂದಾಜು 8 ಗ್ರಾಂ ತೂಕ) ಒದಗಿಸುತ್ತಿದ್ದು ಅಂದಾಜು ಒಟ್ಟು 55 ಸಾವಿರ ರೂ ಗಳನ್ನು ಸಂಬಂಧಿಸಿದ ಮುಜರಾಯಿ ದೇವಾಲಯದ ವತಿಯಿಂದ ಭರಿಸಲಾಗುವುದು.

ದ.ಕ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬಪ್ಪನಾಡು, ಕದ್ರಿ ಶ್ರೀ ಮಂಜುನಾಥ  ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ ಸೇರಿದಂತೆ ಒಟ್ಟು 20 ದೇವಸ್ಥಾನಗಳಲ್ಲಿ ಆಸಕ್ತರು ವಧು ವರರ ಮಾಹಿತಿಗಳೊಂದಿಗೆ ಮಾರ್ಚ್ 27ರ ಒಳಗಾಗಿ ನೊಂದಾಯಿಸಿಕೊಳ್ಳಬಹುದು,  ಸಾಮೂಹಿಕ ವಿವಾಹವು ಎಪ್ರಿಲ್ 26 ರಂದು ಆದಿತ್ಯವಾರ ಅಕ್ಷಯತದಿಗೆಯಂದು ಸುಮೂಹೂರ್ತದಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿಯ ಧಾರ್ಮಿಕ ದತ್ತಿ ಇಲಾಖೆಯಿಂದ ಪಡೆಯಬಹುದು ಹಾಗೂ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

3 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

3 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

12 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

12 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

12 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

13 hours ago