ಉಜಿರೆ: ಕೃಷಿಯಲ್ಲಿ ಖುಷಿ ಕಂಡ ವಿದ್ಯಾರ್ಥಿಗಳು

January 12, 2020
3:11 PM

 

Advertisement
Advertisement

ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ ಚಟುವಟಿಕೆಗಳ ಬಗ್ಯೆ ಮಾಹಿತಿ ಕಲೆ ಹಾಕಿ ಖುಷಿ ಪಟ್ಟರು. ಶಿಕ್ಷಕಿಯರಾದ ಸೌಮ್ಯ, ಜಯಂತಿ ಮತ್ತು ಸಂತೋಷ ಸಹಕರಿಸಿದರು.

 

ತೋಟಗಾರಿಕಾ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಅರಣ್ಯ ಇಲಾಖಾ ಅಧಿಕಾರಿ ಅಶೋಕ್ ಮಾಹಿತಿ, ಮಾರ್ಗದರ್ಶನ ನೀಡಿದರು.
ಜೇನು ಸಾಕಣೆ, ಕಸಿ ಕಟ್ಟುವ ಬಗ್ಯೆ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿವಿಧ ಜಾತಿಯ ಹೂ, ಹಣ್ಣುಗಳು ಹಾಗೂ ತರಕಾರಿಗಳ ಬಗ್ಗೆಯೂ ಸಮಗ್ರ ಮಾಹಿತಿ ನೀಡಲಾಯಿತು. “ನೋಡಿ ತಿಳಿ, ಮಾಡಿ ಕಲಿ” ತತ್ವದಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಂಡು ಮುಂದೆ “ಕೃಷಿ -ಋಷಿ”ಗಳಾಗುವ ದೃಢ ಸಂಕಲ್ಪ ಮಾಡಿದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ
May 29, 2025
7:12 AM
by: The Rural Mirror ಸುದ್ದಿಜಾಲ
ಮೇ 29 | ವಿಕಸಿತ  ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ
May 26, 2025
3:21 PM
by: The Rural Mirror ಸುದ್ದಿಜಾಲ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸು
May 26, 2025
3:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group