ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ ಚಟುವಟಿಕೆಗಳ ಬಗ್ಯೆ ಮಾಹಿತಿ ಕಲೆ ಹಾಕಿ ಖುಷಿ ಪಟ್ಟರು. ಶಿಕ್ಷಕಿಯರಾದ ಸೌಮ್ಯ, ಜಯಂತಿ ಮತ್ತು ಸಂತೋಷ ಸಹಕರಿಸಿದರು.
ತೋಟಗಾರಿಕಾ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಅರಣ್ಯ ಇಲಾಖಾ ಅಧಿಕಾರಿ ಅಶೋಕ್ ಮಾಹಿತಿ, ಮಾರ್ಗದರ್ಶನ ನೀಡಿದರು.
ಜೇನು ಸಾಕಣೆ, ಕಸಿ ಕಟ್ಟುವ ಬಗ್ಯೆ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿವಿಧ ಜಾತಿಯ ಹೂ, ಹಣ್ಣುಗಳು ಹಾಗೂ ತರಕಾರಿಗಳ ಬಗ್ಗೆಯೂ ಸಮಗ್ರ ಮಾಹಿತಿ ನೀಡಲಾಯಿತು. “ನೋಡಿ ತಿಳಿ, ಮಾಡಿ ಕಲಿ” ತತ್ವದಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಂಡು ಮುಂದೆ “ಕೃಷಿ -ಋಷಿ”ಗಳಾಗುವ ದೃಢ ಸಂಕಲ್ಪ ಮಾಡಿದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…