ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ ಚಟುವಟಿಕೆಗಳ ಬಗ್ಯೆ ಮಾಹಿತಿ ಕಲೆ ಹಾಕಿ ಖುಷಿ ಪಟ್ಟರು. ಶಿಕ್ಷಕಿಯರಾದ ಸೌಮ್ಯ, ಜಯಂತಿ ಮತ್ತು ಸಂತೋಷ ಸಹಕರಿಸಿದರು.
ತೋಟಗಾರಿಕಾ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಅರಣ್ಯ ಇಲಾಖಾ ಅಧಿಕಾರಿ ಅಶೋಕ್ ಮಾಹಿತಿ, ಮಾರ್ಗದರ್ಶನ ನೀಡಿದರು.
ಜೇನು ಸಾಕಣೆ, ಕಸಿ ಕಟ್ಟುವ ಬಗ್ಯೆ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿವಿಧ ಜಾತಿಯ ಹೂ, ಹಣ್ಣುಗಳು ಹಾಗೂ ತರಕಾರಿಗಳ ಬಗ್ಗೆಯೂ ಸಮಗ್ರ ಮಾಹಿತಿ ನೀಡಲಾಯಿತು. “ನೋಡಿ ತಿಳಿ, ಮಾಡಿ ಕಲಿ” ತತ್ವದಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಂಡು ಮುಂದೆ “ಕೃಷಿ -ಋಷಿ”ಗಳಾಗುವ ದೃಢ ಸಂಕಲ್ಪ ಮಾಡಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…