ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ ಚಟುವಟಿಕೆಗಳ ಬಗ್ಯೆ ಮಾಹಿತಿ ಕಲೆ ಹಾಕಿ ಖುಷಿ ಪಟ್ಟರು. ಶಿಕ್ಷಕಿಯರಾದ ಸೌಮ್ಯ, ಜಯಂತಿ ಮತ್ತು ಸಂತೋಷ ಸಹಕರಿಸಿದರು.
ತೋಟಗಾರಿಕಾ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಅರಣ್ಯ ಇಲಾಖಾ ಅಧಿಕಾರಿ ಅಶೋಕ್ ಮಾಹಿತಿ, ಮಾರ್ಗದರ್ಶನ ನೀಡಿದರು.
ಜೇನು ಸಾಕಣೆ, ಕಸಿ ಕಟ್ಟುವ ಬಗ್ಯೆ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿವಿಧ ಜಾತಿಯ ಹೂ, ಹಣ್ಣುಗಳು ಹಾಗೂ ತರಕಾರಿಗಳ ಬಗ್ಗೆಯೂ ಸಮಗ್ರ ಮಾಹಿತಿ ನೀಡಲಾಯಿತು. “ನೋಡಿ ತಿಳಿ, ಮಾಡಿ ಕಲಿ” ತತ್ವದಂತೆ ವಿದ್ಯಾರ್ಥಿಗಳು ತಮ್ಮ ಜ್ಞಾನಕ್ಷಿತಿಜವನ್ನು ವಿಸ್ತರಿಸಿಕೊಂಡು ಮುಂದೆ “ಕೃಷಿ -ಋಷಿ”ಗಳಾಗುವ ದೃಢ ಸಂಕಲ್ಪ ಮಾಡಿದರು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…