ಉಜಿರೆ: ಫೆ.11ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲ ಅಣ್ಣಾಸಾಹೇಬ್ ಜೊಲ್ಲೆಯವರು ಆಗಮಿಸಿ ಸಿರಿ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಇವರು ಸಿರಿ ಸಂಸ್ಥೆಯು ಒಂದು ಕುಟುಂಬವಿದ್ದಂತೆ, ಪೂಜ್ಯರ ಹಾಗೂ ಮಾತೃಶ್ರೀ ಅಮ್ಮನವರ ಮಾರ್ಗದರ್ಶನದ ಈ ಸಂಸ್ಥೆ ಮಹಿಳಾ ಸಬಲೀಕರಣದ ದೃಢ ಹೆಜ್ಜೆಯ ಸಂಕಲ್ಪದೊಂದಿಗೆ ಗ್ರಾಮೀಣ ಮಟ್ಟದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗವನ್ನು ನೀಡಿ ಸ್ವಸಹಾಯ ಸಂಘದ ಸದಸ್ಯರು ಘಟಕಗಳಲ್ಲಿ ತಯಾರಿಸಿದ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಸಿರಿ ಬ್ರಾಂಡಿನ ಮೂಲಕ ಮಾರುಕಟ್ಟೆ ಮಾಡುತ್ತಿದ್ದು, ಈ ಸಂಸ್ಥೆ ಉದ್ಯೋಗವನ್ನು ಸೃಷ್ಟಿಸುವ ಕ್ರಾಂತಿಯನ್ನೆ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಶಾಸಕರಾದ ಹರೀಶ್ ಪೂಂಜರವರು ಗ್ರಾಮೀಣ ಪ್ರದೇಶದ ಜನರಿಗೆ ಮೂಲಸೌಕರ್ಯದೊಂದಿಗೆ ಉದ್ಯೋಗವನ್ನು ನೀಡುತ್ತಿರುವ ಸಿರಿ ಸಂಸ್ಥೆ ಮಹಿಳಾ ಸಬಲೀಕರಣದ ಶಕ್ತಿ ಎಂದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ರವರು ಪ್ರಾಸ್ತವಿಕವಾಗಿ ಸಂಸ್ಥೆಯು ನಡೆದು ಬಂದ ಹಾದಿ ಹಾಗೂ ಮುಂದಿನ ಯೋಜನೆಯ ಬಗ್ಗೆ ಮಾನ್ಯ ಸಚಿವರಿಗೆ ಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…