ಉಜಿರೆ: ಫೆ.11ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಕರ್ನಾಟಕ ಘನ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲ ಅಣ್ಣಾಸಾಹೇಬ್ ಜೊಲ್ಲೆಯವರು ಆಗಮಿಸಿ ಸಿರಿ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಇವರು ಸಿರಿ ಸಂಸ್ಥೆಯು ಒಂದು ಕುಟುಂಬವಿದ್ದಂತೆ, ಪೂಜ್ಯರ ಹಾಗೂ ಮಾತೃಶ್ರೀ ಅಮ್ಮನವರ ಮಾರ್ಗದರ್ಶನದ ಈ ಸಂಸ್ಥೆ ಮಹಿಳಾ ಸಬಲೀಕರಣದ ದೃಢ ಹೆಜ್ಜೆಯ ಸಂಕಲ್ಪದೊಂದಿಗೆ ಗ್ರಾಮೀಣ ಮಟ್ಟದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗವನ್ನು ನೀಡಿ ಸ್ವಸಹಾಯ ಸಂಘದ ಸದಸ್ಯರು ಘಟಕಗಳಲ್ಲಿ ತಯಾರಿಸಿದ ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಸಿರಿ ಬ್ರಾಂಡಿನ ಮೂಲಕ ಮಾರುಕಟ್ಟೆ ಮಾಡುತ್ತಿದ್ದು, ಈ ಸಂಸ್ಥೆ ಉದ್ಯೋಗವನ್ನು ಸೃಷ್ಟಿಸುವ ಕ್ರಾಂತಿಯನ್ನೆ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಶಾಸಕರಾದ ಹರೀಶ್ ಪೂಂಜರವರು ಗ್ರಾಮೀಣ ಪ್ರದೇಶದ ಜನರಿಗೆ ಮೂಲಸೌಕರ್ಯದೊಂದಿಗೆ ಉದ್ಯೋಗವನ್ನು ನೀಡುತ್ತಿರುವ ಸಿರಿ ಸಂಸ್ಥೆ ಮಹಿಳಾ ಸಬಲೀಕರಣದ ಶಕ್ತಿ ಎಂದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ರವರು ಪ್ರಾಸ್ತವಿಕವಾಗಿ ಸಂಸ್ಥೆಯು ನಡೆದು ಬಂದ ಹಾದಿ ಹಾಗೂ ಮುಂದಿನ ಯೋಜನೆಯ ಬಗ್ಗೆ ಮಾನ್ಯ ಸಚಿವರಿಗೆ ಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…