ಉಡುಪಿ : ಭಾನುವಾರ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಬಂಡೆಗೆ ಬಡಿದು ಮಗುಚಿಬಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಿಮಂಜೇಶ್ವರ ಸಮೀಪದ ಕೊಡೇರಿಯಿಂದ ಭಾನುವಾರ ಬೆಳಗ್ಗೆ ಸಾಗರ್ ಶ್ರೀ ಹೆಸರಿನ ದೋಣಿಯಲ್ಲಿ 11 ಮೀನುಗಾರರು ಸಮುದ್ರಕ್ಕಿಳಿದಿದ್ದರು. ಮೀನುಗಾರಿಕೆಗೆ ತೆರಳಿದ್ದ ದೋಣಿ ಅಲೆಗಳ ಅಬ್ಬರಕ್ಕೆ ಸಿಲುಕಿದೆ. ಇದರಿಂದ ನಾಗರಾಜ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ನಾಲ್ವರ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಉಳಿದ ಮೀನುಗಾರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಠಾಣೆಯ ಸಿಬ್ಬಂದಿಗಳು ತೆರಳಿದ್ದಾರೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…