ಉಡುಪಿ : ಭಾನುವಾರ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಬಂಡೆಗೆ ಬಡಿದು ಮಗುಚಿಬಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಿಮಂಜೇಶ್ವರ ಸಮೀಪದ ಕೊಡೇರಿಯಿಂದ ಭಾನುವಾರ ಬೆಳಗ್ಗೆ ಸಾಗರ್ ಶ್ರೀ ಹೆಸರಿನ ದೋಣಿಯಲ್ಲಿ 11 ಮೀನುಗಾರರು ಸಮುದ್ರಕ್ಕಿಳಿದಿದ್ದರು. ಮೀನುಗಾರಿಕೆಗೆ ತೆರಳಿದ್ದ ದೋಣಿ ಅಲೆಗಳ ಅಬ್ಬರಕ್ಕೆ ಸಿಲುಕಿದೆ. ಇದರಿಂದ ನಾಗರಾಜ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ನಾಲ್ವರ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಉಳಿದ ಮೀನುಗಾರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಠಾಣೆಯ ಸಿಬ್ಬಂದಿಗಳು ತೆರಳಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…