Advertisement
ಸುದ್ದಿಗಳು

ಉತ್ತಮ ಮಾತುಗಾರಿಗೆ ಜಗತ್ತನ್ನು ಗೆಲ್ಲುವ ಶಕ್ತಿ ಇದೆ

Share

ಬೆಳ್ಳಾರೆ : ಆಧುನಿಕ ಜಗತ್ತಿನಲ್ಲಿ ಒಳ್ಳೆಯ ಮಾತುಗಾರರಿಗೆ ತುಂಬಾ ಬೇಡಿಕೆ ಇದೆ. ಅತ್ಯುತ್ತಮವಾಗಿ ಮಾತನಾಡಬಲ್ಲವ ಜಗತ್ತನ್ನೇ ಗೆಲ್ಲಬಲ್ಲ ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.

Advertisement
Advertisement
Advertisement
Advertisement

ಅವರು ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ನಡೆದ ಎರಡು ದಿನಗಳ ಮಾತುಗಾರಿಕಾ ಕಮ್ಮಟದ ಮುಖ್ಯ ತರಬೇತುದಾರರಾಗಿ ಭಾಗವಹಿಸಿ ತರಬೇತಿ ನೀಡಿದರು. ಉತ್ತಮವಾಗಿ ಮಾತನಾಡುವುದು ಒಂದು ಕಲೆ. ವಿಷಯಾಧಾರಿತವಾಗಿ ನಿರರ್ಗಗಳವಾಗಿ ಮಾತಾಡುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ರಾಜೇಂದ್ರ ಭಟ್ ಕರೆ ನೀಡಿದರು.

Advertisement

ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ, ಉದ್ಯಮಿ ಮಿಥುನ್ ಶೆಣೈ ತರಬೇತಿ ಮಾತುಗಾರಿಕಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿ, ಯುವಕರಿಗೆ ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು ನೀಡುವ ಮೂಲಕ ಜೇಸೀ ಸಂಸ್ಥೆ ಸಮಾಜಕ್ಕೆ ಪ್ರಬುದ್ಧ ನಾಯಕರನ್ನು ನೀಡುವ ಶಕ್ತಿ ಹೊಂದಿದೆ ಎಂದರು.

ರಾಷ್ಟ್ರೀಯ ತರಬೇತಿದಾರ ರಾಜೇಂದ್ರ ಭಟ್ ಹಾಗೂ ಜೇಸಿಐ ವಲಯ ತರಬೇತುದಾರ ದಿನೇಶ್ ಕಾರ್ಕಳ ಎರಡು ದಿನಗಳ ಕಾಲ ವಿವಿಧ ವಿಷಯಗಳಲ್ಲಿ ಮಾತುಗಾರಿಕಾ ಕಮ್ಮಟ ನಡೆಸಿಕೊಟ್ಟರು.

Advertisement

ಬೆಳ್ಳಾರೆ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವಾಧ್ಯಕ್ಷ ಜಯರಾಮ ಉಮಿಕ್ಕಳ, ಯುವಜೇಸೀ ಅಧ್ಯಕ್ಷ ಸಾಗರ್, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರವೀಣ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

7 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

7 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

8 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

17 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

18 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

18 hours ago