ಬೆಳ್ಳಾರೆ : ಆಧುನಿಕ ಜಗತ್ತಿನಲ್ಲಿ ಒಳ್ಳೆಯ ಮಾತುಗಾರರಿಗೆ ತುಂಬಾ ಬೇಡಿಕೆ ಇದೆ. ಅತ್ಯುತ್ತಮವಾಗಿ ಮಾತನಾಡಬಲ್ಲವ ಜಗತ್ತನ್ನೇ ಗೆಲ್ಲಬಲ್ಲ ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.
ಅವರು ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ನಡೆದ ಎರಡು ದಿನಗಳ ಮಾತುಗಾರಿಕಾ ಕಮ್ಮಟದ ಮುಖ್ಯ ತರಬೇತುದಾರರಾಗಿ ಭಾಗವಹಿಸಿ ತರಬೇತಿ ನೀಡಿದರು. ಉತ್ತಮವಾಗಿ ಮಾತನಾಡುವುದು ಒಂದು ಕಲೆ. ವಿಷಯಾಧಾರಿತವಾಗಿ ನಿರರ್ಗಗಳವಾಗಿ ಮಾತಾಡುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ರಾಜೇಂದ್ರ ಭಟ್ ಕರೆ ನೀಡಿದರು.
ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ, ಉದ್ಯಮಿ ಮಿಥುನ್ ಶೆಣೈ ತರಬೇತಿ ಮಾತುಗಾರಿಕಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿ, ಯುವಕರಿಗೆ ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು ನೀಡುವ ಮೂಲಕ ಜೇಸೀ ಸಂಸ್ಥೆ ಸಮಾಜಕ್ಕೆ ಪ್ರಬುದ್ಧ ನಾಯಕರನ್ನು ನೀಡುವ ಶಕ್ತಿ ಹೊಂದಿದೆ ಎಂದರು.
ರಾಷ್ಟ್ರೀಯ ತರಬೇತಿದಾರ ರಾಜೇಂದ್ರ ಭಟ್ ಹಾಗೂ ಜೇಸಿಐ ವಲಯ ತರಬೇತುದಾರ ದಿನೇಶ್ ಕಾರ್ಕಳ ಎರಡು ದಿನಗಳ ಕಾಲ ವಿವಿಧ ವಿಷಯಗಳಲ್ಲಿ ಮಾತುಗಾರಿಕಾ ಕಮ್ಮಟ ನಡೆಸಿಕೊಟ್ಟರು.
ಬೆಳ್ಳಾರೆ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವಾಧ್ಯಕ್ಷ ಜಯರಾಮ ಉಮಿಕ್ಕಳ, ಯುವಜೇಸೀ ಅಧ್ಯಕ್ಷ ಸಾಗರ್, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರವೀಣ್ ವಂದಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…