ಬೆಳ್ಳಾರೆ : ಆಧುನಿಕ ಜಗತ್ತಿನಲ್ಲಿ ಒಳ್ಳೆಯ ಮಾತುಗಾರರಿಗೆ ತುಂಬಾ ಬೇಡಿಕೆ ಇದೆ. ಅತ್ಯುತ್ತಮವಾಗಿ ಮಾತನಾಡಬಲ್ಲವ ಜಗತ್ತನ್ನೇ ಗೆಲ್ಲಬಲ್ಲ ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.
ಅವರು ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ನಡೆದ ಎರಡು ದಿನಗಳ ಮಾತುಗಾರಿಕಾ ಕಮ್ಮಟದ ಮುಖ್ಯ ತರಬೇತುದಾರರಾಗಿ ಭಾಗವಹಿಸಿ ತರಬೇತಿ ನೀಡಿದರು. ಉತ್ತಮವಾಗಿ ಮಾತನಾಡುವುದು ಒಂದು ಕಲೆ. ವಿಷಯಾಧಾರಿತವಾಗಿ ನಿರರ್ಗಗಳವಾಗಿ ಮಾತಾಡುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ರಾಜೇಂದ್ರ ಭಟ್ ಕರೆ ನೀಡಿದರು.
ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ, ಉದ್ಯಮಿ ಮಿಥುನ್ ಶೆಣೈ ತರಬೇತಿ ಮಾತುಗಾರಿಕಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿ, ಯುವಕರಿಗೆ ವ್ಯಕ್ತಿತ್ವ ವಿಕಸನದ ತರಬೇತಿಗಳನ್ನು ನೀಡುವ ಮೂಲಕ ಜೇಸೀ ಸಂಸ್ಥೆ ಸಮಾಜಕ್ಕೆ ಪ್ರಬುದ್ಧ ನಾಯಕರನ್ನು ನೀಡುವ ಶಕ್ತಿ ಹೊಂದಿದೆ ಎಂದರು.
ರಾಷ್ಟ್ರೀಯ ತರಬೇತಿದಾರ ರಾಜೇಂದ್ರ ಭಟ್ ಹಾಗೂ ಜೇಸಿಐ ವಲಯ ತರಬೇತುದಾರ ದಿನೇಶ್ ಕಾರ್ಕಳ ಎರಡು ದಿನಗಳ ಕಾಲ ವಿವಿಧ ವಿಷಯಗಳಲ್ಲಿ ಮಾತುಗಾರಿಕಾ ಕಮ್ಮಟ ನಡೆಸಿಕೊಟ್ಟರು.
ಬೆಳ್ಳಾರೆ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವಾಧ್ಯಕ್ಷ ಜಯರಾಮ ಉಮಿಕ್ಕಳ, ಯುವಜೇಸೀ ಅಧ್ಯಕ್ಷ ಸಾಗರ್, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರವೀಣ್ ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…