ಉತ್ತರಾಖಂಡದಲ್ಲಿ ಮೇಘಸ್ಫೋಟ- 3 ಮಂದಿ ಬಲಿ – 8 ಮಂದಿ ನಾಪತ್ತೆ | ರಾಷ್ಟ್ರ ರಾಜಧಾನಿಯಲ್ಲೂ ಮಳೆಯಬ್ಬರ |

July 20, 2020
12:08 PM

ಉತ್ತರಾಖಂಡ/ನವದೆಹಲಿ:  ಉತ್ತರಾಖಂಡದಲ್ಲಿ ಭೀಕರ ಮಳೆಯಾಗುತ್ತಿದೆ. ಕಳೆದ ವಾರವಷ್ಟೇ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದಾಗಿ ಕೇದಾರನಾಥ ಕಣಿವೆಯಲ್ಲಿ ಭಾರಿ ಹಾನಿಗೆ ಕಾರಣವಾಗಿತ್ತು.ಇದೀಗ ಮತ್ತೆ ಮೇಘಸ್ಫೋಟವಾಗಿದೆ.

Advertisement

ಉತ್ತರಾಖಂಡದ ಪಿಥೋರಗಢದ ಮಾಡ್ಕೋಟ್ ಪ್ರದೇಶದಲ್ಲಿ  ಮೇಘಸ್ಫೋಟದಿಂದಾಗಿ  ಮೂರು ಮಂದಿ  ಪ್ರಾಣ ಕಳೆದುಕೊಂಡರೆ, ಪಕ್ಕದ ಹಳ್ಳಿಯ ಎಂಟು ಜನರು ಕಾಣೆಯಾಗಿದ್ದಾರೆ ಎಂದು ಪಿಥೋರಗಢದ ಜಿಲ್ಲಾಧಿಕಾರಿ  ತಿಳಿಸಿದ್ದಾರೆ ಘಟನಾ ಸ್ಥಳದಲ್ಲಿ ರಕ್ಷಣಾ ತಂಡವಿದ್ದು, ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಪಿಥೋರಗಡ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಪಟ್ಟಣ ಮುನ್ಸಿಯರಿಯಲ್ಲಿ  ಸುರಿದ ನಿರಂತರ ಮಳೆಯಿಂದಾಗಿ  ನಾಲ್ಕು ಮನೆಗಳು ಕುಸಿದು, ಒಂದು ಸೇತುವೆಗೆ ಹಾನಿಯಾಗಿದೆ. ಭಾರಿ ಮಳೆಯಿಂದಾಗಿ ಗೋರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅದರ ಸಮೀಪ ವಾಸಿಸುವ ಜನರನ್ನು ಸ್ಥಳೀಯ ಆಡಳಿತವು ಸುರಕ್ಷಿತ ಪ್ರದೇಶಗಳತ್ತ ಸ್ಥಳಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ನವದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಎರಡು ಮಂದಿ ಬಲಿಯಾಗಿದ್ದಾರೆ.  ದೆಹಲಿ , ಅಸ್ಸಾಂ, ಬಿಹಾರ, ಒರಿಸ್ಸಾ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group