Advertisement
ರಾಷ್ಟ್ರೀಯ

ಉತ್ತರಾಖಂಡದಲ್ಲಿ ಮೇಘಸ್ಫೋಟ- 3 ಮಂದಿ ಬಲಿ – 8 ಮಂದಿ ನಾಪತ್ತೆ | ರಾಷ್ಟ್ರ ರಾಜಧಾನಿಯಲ್ಲೂ ಮಳೆಯಬ್ಬರ |

Share

ಉತ್ತರಾಖಂಡ/ನವದೆಹಲಿ:  ಉತ್ತರಾಖಂಡದಲ್ಲಿ ಭೀಕರ ಮಳೆಯಾಗುತ್ತಿದೆ. ಕಳೆದ ವಾರವಷ್ಟೇ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದಾಗಿ ಕೇದಾರನಾಥ ಕಣಿವೆಯಲ್ಲಿ ಭಾರಿ ಹಾನಿಗೆ ಕಾರಣವಾಗಿತ್ತು.ಇದೀಗ ಮತ್ತೆ ಮೇಘಸ್ಫೋಟವಾಗಿದೆ.

ಉತ್ತರಾಖಂಡದ ಪಿಥೋರಗಢದ ಮಾಡ್ಕೋಟ್ ಪ್ರದೇಶದಲ್ಲಿ  ಮೇಘಸ್ಫೋಟದಿಂದಾಗಿ  ಮೂರು ಮಂದಿ  ಪ್ರಾಣ ಕಳೆದುಕೊಂಡರೆ, ಪಕ್ಕದ ಹಳ್ಳಿಯ ಎಂಟು ಜನರು ಕಾಣೆಯಾಗಿದ್ದಾರೆ ಎಂದು ಪಿಥೋರಗಢದ ಜಿಲ್ಲಾಧಿಕಾರಿ  ತಿಳಿಸಿದ್ದಾರೆ ಘಟನಾ ಸ್ಥಳದಲ್ಲಿ ರಕ್ಷಣಾ ತಂಡವಿದ್ದು, ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಪಿಥೋರಗಡ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಪಟ್ಟಣ ಮುನ್ಸಿಯರಿಯಲ್ಲಿ  ಸುರಿದ ನಿರಂತರ ಮಳೆಯಿಂದಾಗಿ  ನಾಲ್ಕು ಮನೆಗಳು ಕುಸಿದು, ಒಂದು ಸೇತುವೆಗೆ ಹಾನಿಯಾಗಿದೆ. ಭಾರಿ ಮಳೆಯಿಂದಾಗಿ ಗೋರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅದರ ಸಮೀಪ ವಾಸಿಸುವ ಜನರನ್ನು ಸ್ಥಳೀಯ ಆಡಳಿತವು ಸುರಕ್ಷಿತ ಪ್ರದೇಶಗಳತ್ತ ಸ್ಥಳಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ನವದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಎರಡು ಮಂದಿ ಬಲಿಯಾಗಿದ್ದಾರೆ.  ದೆಹಲಿ , ಅಸ್ಸಾಂ, ಬಿಹಾರ, ಒರಿಸ್ಸಾ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

13 minutes ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

29 minutes ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

51 minutes ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

9 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

19 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

23 hours ago