ಉತ್ತರಾಖಂಡ/ನವದೆಹಲಿ: ಉತ್ತರಾಖಂಡದಲ್ಲಿ ಭೀಕರ ಮಳೆಯಾಗುತ್ತಿದೆ. ಕಳೆದ ವಾರವಷ್ಟೇ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದಾಗಿ ಕೇದಾರನಾಥ ಕಣಿವೆಯಲ್ಲಿ ಭಾರಿ ಹಾನಿಗೆ ಕಾರಣವಾಗಿತ್ತು.ಇದೀಗ ಮತ್ತೆ ಮೇಘಸ್ಫೋಟವಾಗಿದೆ.
ಉತ್ತರಾಖಂಡದ ಪಿಥೋರಗಢದ ಮಾಡ್ಕೋಟ್ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಮೂರು ಮಂದಿ ಪ್ರಾಣ ಕಳೆದುಕೊಂಡರೆ, ಪಕ್ಕದ ಹಳ್ಳಿಯ ಎಂಟು ಜನರು ಕಾಣೆಯಾಗಿದ್ದಾರೆ ಎಂದು ಪಿಥೋರಗಢದ ಜಿಲ್ಲಾಧಿಕಾರಿ ತಿಳಿಸಿದ್ದಾರೆ ಘಟನಾ ಸ್ಥಳದಲ್ಲಿ ರಕ್ಷಣಾ ತಂಡವಿದ್ದು, ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಪಿಥೋರಗಡ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಪಟ್ಟಣ ಮುನ್ಸಿಯರಿಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ನಾಲ್ಕು ಮನೆಗಳು ಕುಸಿದು, ಒಂದು ಸೇತುವೆಗೆ ಹಾನಿಯಾಗಿದೆ. ಭಾರಿ ಮಳೆಯಿಂದಾಗಿ ಗೋರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಅದರ ಸಮೀಪ ವಾಸಿಸುವ ಜನರನ್ನು ಸ್ಥಳೀಯ ಆಡಳಿತವು ಸುರಕ್ಷಿತ ಪ್ರದೇಶಗಳತ್ತ ಸ್ಥಳಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ನವದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಎರಡು ಮಂದಿ ಬಲಿಯಾಗಿದ್ದಾರೆ. ದೆಹಲಿ , ಅಸ್ಸಾಂ, ಬಿಹಾರ, ಒರಿಸ್ಸಾ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…