ಉತ್ತರಪ್ರದೇಶ : ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಪಾಗೋನ ಗ್ರಾಮದ ಶಿವದೇವಾಲಯದ ಒಳಗೆ ಇಬ್ಬರು ಸಾಧುಗಳು ಕೊಲೆಯಾಗಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.
ಮಂಗಳವಾರ ಬೆಳಿಗ್ಗೆ ಜನರು ದೇವಸ್ಥಾನಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು ಜಗಂದಾಸ್ (55) ಮತ್ತು ಸೇವಾದಾಸ್ (35) ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಮಾಹಿತಿ ಪಡೆದು ಜಿಲ್ಲೆಯ ಅದಿಕಾರಿಗಳಿಗೆ ತಕ್ಷಣ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಸೂಚಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಆದೇಶಿಸಿದ್ದಾರೆ.
ಆರಂಭಿಕ ತನಿಖೆಯ ಪ್ರಕಾರ ಆರೋಪಿಯು ಕೆಲ ದಿನಗಳ ಹಿಂದೆ ದೇವಸ್ಥಾನ ಸಾಧುವಿಗೆ ಸಂಬಂಧಿಸಿದ ವಸ್ತು ಕಳ್ಳತನ ಮಾಡಿದ್ದ ಇದಕ್ಕಾಗಿ ಸಾಧು ಗದರಿಸಿದ್ದರು. ಅದಾದ ಬಳಿಕ ಇಂದು ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ ಎಂದು ಬುಲಂದ್ಶಹರ್ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
( ANI)
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…