ಉತ್ತರಪ್ರದೇಶ : ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಪಾಗೋನ ಗ್ರಾಮದ ಶಿವದೇವಾಲಯದ ಒಳಗೆ ಇಬ್ಬರು ಸಾಧುಗಳು ಕೊಲೆಯಾಗಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.
ಮಂಗಳವಾರ ಬೆಳಿಗ್ಗೆ ಜನರು ದೇವಸ್ಥಾನಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು ಜಗಂದಾಸ್ (55) ಮತ್ತು ಸೇವಾದಾಸ್ (35) ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಮಾಹಿತಿ ಪಡೆದು ಜಿಲ್ಲೆಯ ಅದಿಕಾರಿಗಳಿಗೆ ತಕ್ಷಣ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಸೂಚಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಆದೇಶಿಸಿದ್ದಾರೆ.
ಆರಂಭಿಕ ತನಿಖೆಯ ಪ್ರಕಾರ ಆರೋಪಿಯು ಕೆಲ ದಿನಗಳ ಹಿಂದೆ ದೇವಸ್ಥಾನ ಸಾಧುವಿಗೆ ಸಂಬಂಧಿಸಿದ ವಸ್ತು ಕಳ್ಳತನ ಮಾಡಿದ್ದ ಇದಕ್ಕಾಗಿ ಸಾಧು ಗದರಿಸಿದ್ದರು. ಅದಾದ ಬಳಿಕ ಇಂದು ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ ಎಂದು ಬುಲಂದ್ಶಹರ್ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
( ANI)
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…