ಉತ್ತರಪ್ರದೇಶ : ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಪಾಗೋನ ಗ್ರಾಮದ ಶಿವದೇವಾಲಯದ ಒಳಗೆ ಇಬ್ಬರು ಸಾಧುಗಳು ಕೊಲೆಯಾಗಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.
ಮಂಗಳವಾರ ಬೆಳಿಗ್ಗೆ ಜನರು ದೇವಸ್ಥಾನಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು ಜಗಂದಾಸ್ (55) ಮತ್ತು ಸೇವಾದಾಸ್ (35) ಎಂದು ಗುರುತಿಸಲಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಮಾಹಿತಿ ಪಡೆದು ಜಿಲ್ಲೆಯ ಅದಿಕಾರಿಗಳಿಗೆ ತಕ್ಷಣ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಸೂಚಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಆದೇಶಿಸಿದ್ದಾರೆ.
ಆರಂಭಿಕ ತನಿಖೆಯ ಪ್ರಕಾರ ಆರೋಪಿಯು ಕೆಲ ದಿನಗಳ ಹಿಂದೆ ದೇವಸ್ಥಾನ ಸಾಧುವಿಗೆ ಸಂಬಂಧಿಸಿದ ವಸ್ತು ಕಳ್ಳತನ ಮಾಡಿದ್ದ ಇದಕ್ಕಾಗಿ ಸಾಧು ಗದರಿಸಿದ್ದರು. ಅದಾದ ಬಳಿಕ ಇಂದು ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ ಎಂದು ಬುಲಂದ್ಶಹರ್ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
( ANI)
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…