ಮಂಗಳೂರು: ಶಿಕ್ಷಣ ಇಲಾಖೆಯ ಸೇವಾ ನಿಯಮಾವಳಿಗಳಿಗೆ ಹಾಗೂ ಭಾರತದ ಸಂವಿಧಾನಕ್ಕೆ ಅಪಚಾರ ಎಸಗುವಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಸುಳ್ಯದ ಕನ್ನಡ ಉಪನ್ಯಾಸಕ ಡಾ| ಪೂವಪ್ಪ ಕಣಿಯೂರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾದ ಸೂರಜ್ ಜೈನ್ ಮಾರ್ನಾಡ್ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಡಾ|ಪೂವಪ್ಪ ಕಣಿಯೂರು ಅವರು ವಾಟ್ಸಪ್ ಮೂಲಕ ಹಲವು ಗ್ರೂಪುಗಳಿಗೆ ಸಿಎಎ ಬಗ್ಗೆ ಅಸಂವಿಧಾನಿಕವಾಗಿ ಬರೆದಿದ್ದಾರೆ, ಸಂಸತ್ತಿನ ಎರಡೂ ಸದನದಲ್ಲಿ ಅಂಗೀಕಾರವಾದ ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಅಸಂವಿಧಾನಿಕವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಸರಕಾರ ಜಾರಿಗೆ ತಂದಿರುವ ಕಾಯಿದೆಯ ವಿರುದ್ಧವಾಗಿ ಸರಕಾರಿ ನೌಕರನಾಗಿ ಭಾರತೀಯ ಸಂಸತ್ ಅಂಗೀಕರಿಸಿದ ಒಂದು ಕಾಯಿದೆಯ ವಿರುದ್ಧ ಬರೆದಿರುವ ಕಾರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.
ಈ ಸಂದರ್ಭ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿ ರವಿಚಂದ್ರ ಈ ಸಂದರ್ಭದಲ್ಲಿ ಹಾಜರಿದ್ದರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…