ಮಂಗಳೂರು: ಶಿಕ್ಷಣ ಇಲಾಖೆಯ ಸೇವಾ ನಿಯಮಾವಳಿಗಳಿಗೆ ಹಾಗೂ ಭಾರತದ ಸಂವಿಧಾನಕ್ಕೆ ಅಪಚಾರ ಎಸಗುವಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಸುಳ್ಯದ ಕನ್ನಡ ಉಪನ್ಯಾಸಕ ಡಾ| ಪೂವಪ್ಪ ಕಣಿಯೂರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾದ ಸೂರಜ್ ಜೈನ್ ಮಾರ್ನಾಡ್ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಡಾ|ಪೂವಪ್ಪ ಕಣಿಯೂರು ಅವರು ವಾಟ್ಸಪ್ ಮೂಲಕ ಹಲವು ಗ್ರೂಪುಗಳಿಗೆ ಸಿಎಎ ಬಗ್ಗೆ ಅಸಂವಿಧಾನಿಕವಾಗಿ ಬರೆದಿದ್ದಾರೆ, ಸಂಸತ್ತಿನ ಎರಡೂ ಸದನದಲ್ಲಿ ಅಂಗೀಕಾರವಾದ ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಅಸಂವಿಧಾನಿಕವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಸರಕಾರ ಜಾರಿಗೆ ತಂದಿರುವ ಕಾಯಿದೆಯ ವಿರುದ್ಧವಾಗಿ ಸರಕಾರಿ ನೌಕರನಾಗಿ ಭಾರತೀಯ ಸಂಸತ್ ಅಂಗೀಕರಿಸಿದ ಒಂದು ಕಾಯಿದೆಯ ವಿರುದ್ಧ ಬರೆದಿರುವ ಕಾರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.
ಈ ಸಂದರ್ಭ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿ ರವಿಚಂದ್ರ ಈ ಸಂದರ್ಭದಲ್ಲಿ ಹಾಜರಿದ್ದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…