Advertisement
ಸುದ್ದಿಗಳು

ಉಪ ಚುನಾವಣೆಯಲ್ಲಿ ಭರ್ಜರಿ ಜಯ- ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

Share

ಸುಳ್ಯ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ 15 ಸ್ಥಾನಗಳ ಪೈಕಿ 12ರಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ ಬಿಜೆಪಿ ಕಚೇರಿಯ ಬಳಿಯಲ್ಲಿ ನಡೆಯಿತು.

ವಿಜಯೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಸ್. ಅಂಗಾರ ರಾಜ್ಯದಲ್ಲಿ ನಿರೀಕ್ಷೆಯಂತೆ ಗೆಲುವು ಬಿಜೆಪಿಗೆ ದೊರೆತಿದೆ. ಮತದಾರರು ಪಕ್ಷದ ಮೇಲೆ ಪ್ರೀತಿಯಿಟ್ಟು ದೊಡ್ಡ ಮಟ್ಟದ ಗೆಲುವು ನೀಡಿದ್ದಾರೆ. ಜನರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಈ ಸೋಲಿನಿಂದ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅಸ್ತಿತ್ವವನ್ನು ಕಳೆದುಕೊಂಡಿದೆ ಎಂದು ಹೇಳಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ ಬಿಜೆಪಿಗೆ ದೊಡ್ಡ ಮಟ್ಟದ ಗೆಲುವು ರಾಜ್ಯದ ಜನತೆ ನೀಡಿದ್ದಾರೆ. ಮುಂದಿನ ಮೂರು ವರ್ಷ ಯಡಿಯೂರಪ್ಪ ಸರಕಾರ ಅಭಿವೃದ್ದಿ ಪರವಾದ ಆಡಳಿತ ನೀಡಲಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‍ನವರ ಹಗಲು ಕನಸಿಗೆ ರಾಜ್ಯದ ಜನ ತಣ್ಣೀರೆರಚಿದ್ದಾರೆ ಎಂದರು.

ವಿಜಯೋತ್ಸವದಲ್ಲಿ ತಾ.ಪಂ ಅದ್ಯಕ್ಷ ಚನಿಯ ಕಲ್ತಡ್ಕ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಜಿ.ಪಂ ಸದಸ್ಯ ಎಸ್.ಎನ್.ಮನ್ಮಥ, ಸುಭೋದ್ ಶೇಟ್ಟಿ ಮೇನಾಲ, ನಗರ ಪಂಚಾಯಿತಿ ಸದಸ್ಯರಾದ ಬುದ್ದನಾಯ್ಕ, ಶಶಿಕಲಾ ನೀರಬಿದಿರೆ, ಕಿಶೋರಿ ಶೇಟ್, ಪೂಜಿತಾ ಕೆ.ಯು, ವಾಣಿಶ್ರೀ ಜಟ್ಟಿಪಳ್ಳ, ಶೀಲಾ ಅರುಣ್ ಕುರುಂಜಿ, ನಾರಾಯಣ ಶಾಂತಿನಗರ, ಶಿಲ್ಪಾ ಸುದೇವ್, ವಿನಯ ಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ ಕುರುಂಜಿಭಾಗ್, ಪ್ರಮುಖರಾದ ಉದಯಕುಮಾರ್ ಆಚಾರ್, ಜಯಪ್ರಕಾಶ್ ಕುಂಚಡ್ಕ, ಎನ್.ಟಿ.ಹೊನ್ನಪ್ಪ, ಜಯರಾಮ ರೈ ಜಾಲ್ಸೂರು, ಬೂಡು ರಾಧಾಕೃಷ್ಣ ರೈ, ಹರೀಶ್ ಬುಡುಪನ್ನೇ, ಶೀನಪ್ಪ ಬಯಂಬು, ವಿನುತಾ ಪಾತಿಕಲ್ಲು, ಹೇಮಂತ್ ಕಂದಡ್ಕ, ಮಹೇಶ್ ರೈ ಮೇನಾಲ, ಅಬ್ದುಲ್ ಕುಂಞ ನೆಲ್ಯಡ್ಕ, ನಾಗರಾಜ್ ಮುಳ್ಯ ಮೊದಲಾದವರು ಉಪಸ್ಥಿತರಿದ್ದರು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

10 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

16 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

17 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago