ಸುಳ್ಯ: ಖ್ಯಾತ ಉರಗತಜ್ಞ, ಸಾಮಾಜಿಕ ಕಾರ್ಯಕರ್ತ ಸುಳ್ಯ ಕೇರ್ಪಳ ನಿವಾಸಿ ಎಂ.ಪಿ. ವಾಸುದೇವ(58) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕೆಲ ಸಮಯಗಳಿಂದ ಅಸೌಖ್ಯದಿಂದಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು. ನಿನ್ನೆ ಆರೋಗ್ಯ ಮತ್ತೆ ಹದಗೆಟ್ಟು, ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು.
ಸುಳ್ಯದಲ್ಲಿ ಹಲವು ವರ್ಷದಿಂದ ತರಂಗಿಣಿ ಕೆಟರಿಂಗ್ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದ ವಾಸುದೇವರು ಉರಗ ತಜ್ಞರಾಗಿಯೂ ಖ್ಯಾತರಾಗಿದ್ದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಮೂಲಕ ಗಮನ ಸೆಳೆದಿದ್ದರು. ಮೂರು ಬಾರಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಪಕ್ಷೇತರರಾಗಿ ಸ್ಫರ್ಧಿಸಿದ್ದರು. ಹಾವುಗಳನ್ನು ಹಿಡಿಯುವುದರಲ್ಲಿ ನಿಸ್ಸೀಮರಾಗಿದ್ದ ಅವರು ಸಾವಿರಾರು ಹಾವುಗಳನ್ನು ಹಿಡಿದು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದರು. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ಅವರು ಕೆಲವು ವರ್ಷಗಳ ಹಿಂದೆ ಸುಳ್ಯದಲ್ಲಿ ವಿನೂತನ ಬೀಚ್ ಕಬಡ್ಡಿಯನ್ನು ಸಂಘಟಿಸಲು ನೇತೃತ್ವ ವಹಿಸಿದ್ದರು.
ಮೃತರು ಪತ್ನಿ ವಾರಿಜಾ, ಪುತ್ರಿ ವಿಸ್ಮಿತಾ, ಪುತ್ರ ವಿನೀತ್ರನ್ನ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…