ಸುದ್ದಿಗಳು

ಉಳುವಾರು ಕಪ್ ಕ್ರಿಕೆಟ್- ಉಳುವಾರು ಚಾಂಪಿಯನ್, ಮೇಲ್ ಚೆಂಬು ರನ್ನರ್ಸ್ ಅಪ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಉಳುವಾರು ಕುಟುಂಬಸ್ಥರ ಆಶ್ರಯದಲ್ಲಿ ಹತ್ತು ಕುಟುಂಬ, ಹದಿನೆಂಟು ಗೋತ್ರದ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಕುಟುಂಬವಾರು ಆಹ್ವಾನಿತ ಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟವು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುವಿನಲ್ಲಿ ನಡೆಯಿತು.

Advertisement

ಕುಟುಂಬವಾರು ಕ್ರಿಕೆಟ್ ಪಂದ್ಯಾಟದಲ್ಲಿ ಉಳುವಾರು ಕುಟುಂಬ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು. ರನ್ನರ್ಸ್ ಪ್ರಶಸ್ತಿಯನ್ನು ಮೇಲ್ ಚೆಂಬು ಕುಟುಂಬಸ್ಥರು ಪಡೆದುಕೊಂಡರು.

ಸೆಮಿಫೈನಲ್ಸ್ ನಲ್ಲಿ ಮೇಲ್ ಚೆಂಬು ಕುಟುಂಬವು ದೇರಜೆ ಕುಟುಂಬವನ್ನು ಸೋಲಿಸಿ ಪೈನಲ್ ಪ್ರವೇಶಿಸಿದರೆ, ಆತಿಥೇಯ ಉಳುವಾರು ಕುಟುಂಬವು ಅಮೆಮನೆ ತಂಡವನ್ನು ಮಣಿಸಿ ಪೈನಲ್ ಪ್ರವೇಶಿಸಿದವು. ಪೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಉಳುವಾರು ಕುಟುಂಬವು ನಿಗದಿತ 6 ಓವರ್ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 44 ರನ್ ಗಳಿಸಿತ್ತು.
ಈ ಮೊತ್ತವನ್ನು ಬೆನ್ನಟ್ಟಿದ ಮೇಲ್ ಚೆಂಬು ಕುಟುಂಬವು 5 ವಿಕೆಟ್‌ ನಷ್ಟಕ್ಕೆ 41ರನ್ ಗಳಿಸಿ 3 ರನ್ ಗಳ ಸೋಲು ಅನುಭವಿಸಿತು.

ಮಹಿಳೆಯರ ಹಗ್ಗಜಗ್ಗಾಟದಲ್ಲಿ ಕಾಯರ ಕುಟುಂಬಸ್ಥರು ಪ್ರಥಮ ಸ್ಥಾನ ಹಾಗೂ ಕುರುಂಜಿ ಕುಟುಂಬಸ್ಥರು ದ್ವಿತೀಯ ಸ್ಥಾನ ಗಳಿಸಿದರು. ತೀರ್ಪುಗಾರರಾಗಿ ಪ್ರಶಾಂತ್ ಊರುಬೈಲು ಮತ್ತು ಪ್ರದೀಪ ಕುಂಬಳಚೇರಿ ಕಾರ್ಯ ನಿರ್ವಹಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಕುತ್ತಮಟ್ಟೆ, ದಯಾನಂದ ಕುರುಂಜಿ, ಅಯ್ಯಣ್ಣ ಉಳುವಾರು, ಲೋಕನಾಥ ಸಣ್ಣಮನೆ, ಪುನೀತ ಕೂಸಪ್ಪ ಸಣ್ಣಮನೆ, ಹುಕ್ರಪ್ಪಗೌಡ, ಸುಮಿತ್ರಗೌಡ ಉಳುವಾರು, ದಮಯಂತಿ ಕೇಶವಗೌಡ ಉಳುವಾರು, ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

2 hours ago

ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |

ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…

3 hours ago

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

12 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

14 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

14 hours ago