Advertisement
ಸುದ್ದಿಗಳು

ಉಳುವಾರು ಕಪ್ ಕ್ರಿಕೆಟ್- ಉಳುವಾರು ಚಾಂಪಿಯನ್, ಮೇಲ್ ಚೆಂಬು ರನ್ನರ್ಸ್ ಅಪ್

Share

ಸುಳ್ಯ: ಉಳುವಾರು ಕುಟುಂಬಸ್ಥರ ಆಶ್ರಯದಲ್ಲಿ ಹತ್ತು ಕುಟುಂಬ, ಹದಿನೆಂಟು ಗೋತ್ರದ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಕುಟುಂಬವಾರು ಆಹ್ವಾನಿತ ಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟವು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುವಿನಲ್ಲಿ ನಡೆಯಿತು.

ಕುಟುಂಬವಾರು ಕ್ರಿಕೆಟ್ ಪಂದ್ಯಾಟದಲ್ಲಿ ಉಳುವಾರು ಕುಟುಂಬ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು. ರನ್ನರ್ಸ್ ಪ್ರಶಸ್ತಿಯನ್ನು ಮೇಲ್ ಚೆಂಬು ಕುಟುಂಬಸ್ಥರು ಪಡೆದುಕೊಂಡರು.

ಸೆಮಿಫೈನಲ್ಸ್ ನಲ್ಲಿ ಮೇಲ್ ಚೆಂಬು ಕುಟುಂಬವು ದೇರಜೆ ಕುಟುಂಬವನ್ನು ಸೋಲಿಸಿ ಪೈನಲ್ ಪ್ರವೇಶಿಸಿದರೆ, ಆತಿಥೇಯ ಉಳುವಾರು ಕುಟುಂಬವು ಅಮೆಮನೆ ತಂಡವನ್ನು ಮಣಿಸಿ ಪೈನಲ್ ಪ್ರವೇಶಿಸಿದವು. ಪೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಉಳುವಾರು ಕುಟುಂಬವು ನಿಗದಿತ 6 ಓವರ್ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 44 ರನ್ ಗಳಿಸಿತ್ತು.
ಈ ಮೊತ್ತವನ್ನು ಬೆನ್ನಟ್ಟಿದ ಮೇಲ್ ಚೆಂಬು ಕುಟುಂಬವು 5 ವಿಕೆಟ್‌ ನಷ್ಟಕ್ಕೆ 41ರನ್ ಗಳಿಸಿ 3 ರನ್ ಗಳ ಸೋಲು ಅನುಭವಿಸಿತು.

ಮಹಿಳೆಯರ ಹಗ್ಗಜಗ್ಗಾಟದಲ್ಲಿ ಕಾಯರ ಕುಟುಂಬಸ್ಥರು ಪ್ರಥಮ ಸ್ಥಾನ ಹಾಗೂ ಕುರುಂಜಿ ಕುಟುಂಬಸ್ಥರು ದ್ವಿತೀಯ ಸ್ಥಾನ ಗಳಿಸಿದರು. ತೀರ್ಪುಗಾರರಾಗಿ ಪ್ರಶಾಂತ್ ಊರುಬೈಲು ಮತ್ತು ಪ್ರದೀಪ ಕುಂಬಳಚೇರಿ ಕಾರ್ಯ ನಿರ್ವಹಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಕುತ್ತಮಟ್ಟೆ, ದಯಾನಂದ ಕುರುಂಜಿ, ಅಯ್ಯಣ್ಣ ಉಳುವಾರು, ಲೋಕನಾಥ ಸಣ್ಣಮನೆ, ಪುನೀತ ಕೂಸಪ್ಪ ಸಣ್ಣಮನೆ, ಹುಕ್ರಪ್ಪಗೌಡ, ಸುಮಿತ್ರಗೌಡ ಉಳುವಾರು, ದಮಯಂತಿ ಕೇಶವಗೌಡ ಉಳುವಾರು, ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

19 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

20 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago