ಸುಳ್ಯ: ಉಳುವಾರು ಕುಟುಂಬಸ್ಥರ ಆಶ್ರಯದಲ್ಲಿ ಹತ್ತು ಕುಟುಂಬ, ಹದಿನೆಂಟು ಗೋತ್ರದ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಕುಟುಂಬವಾರು ಆಹ್ವಾನಿತ ಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟವು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡುವಿನಲ್ಲಿ ನಡೆಯಿತು.
ಕುಟುಂಬವಾರು ಕ್ರಿಕೆಟ್ ಪಂದ್ಯಾಟದಲ್ಲಿ ಉಳುವಾರು ಕುಟುಂಬ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು. ರನ್ನರ್ಸ್ ಪ್ರಶಸ್ತಿಯನ್ನು ಮೇಲ್ ಚೆಂಬು ಕುಟುಂಬಸ್ಥರು ಪಡೆದುಕೊಂಡರು.
ಸೆಮಿಫೈನಲ್ಸ್ ನಲ್ಲಿ ಮೇಲ್ ಚೆಂಬು ಕುಟುಂಬವು ದೇರಜೆ ಕುಟುಂಬವನ್ನು ಸೋಲಿಸಿ ಪೈನಲ್ ಪ್ರವೇಶಿಸಿದರೆ, ಆತಿಥೇಯ ಉಳುವಾರು ಕುಟುಂಬವು ಅಮೆಮನೆ ತಂಡವನ್ನು ಮಣಿಸಿ ಪೈನಲ್ ಪ್ರವೇಶಿಸಿದವು. ಪೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಉಳುವಾರು ಕುಟುಂಬವು ನಿಗದಿತ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 44 ರನ್ ಗಳಿಸಿತ್ತು.
ಈ ಮೊತ್ತವನ್ನು ಬೆನ್ನಟ್ಟಿದ ಮೇಲ್ ಚೆಂಬು ಕುಟುಂಬವು 5 ವಿಕೆಟ್ ನಷ್ಟಕ್ಕೆ 41ರನ್ ಗಳಿಸಿ 3 ರನ್ ಗಳ ಸೋಲು ಅನುಭವಿಸಿತು.
ಮಹಿಳೆಯರ ಹಗ್ಗಜಗ್ಗಾಟದಲ್ಲಿ ಕಾಯರ ಕುಟುಂಬಸ್ಥರು ಪ್ರಥಮ ಸ್ಥಾನ ಹಾಗೂ ಕುರುಂಜಿ ಕುಟುಂಬಸ್ಥರು ದ್ವಿತೀಯ ಸ್ಥಾನ ಗಳಿಸಿದರು. ತೀರ್ಪುಗಾರರಾಗಿ ಪ್ರಶಾಂತ್ ಊರುಬೈಲು ಮತ್ತು ಪ್ರದೀಪ ಕುಂಬಳಚೇರಿ ಕಾರ್ಯ ನಿರ್ವಹಿಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಕುತ್ತಮಟ್ಟೆ, ದಯಾನಂದ ಕುರುಂಜಿ, ಅಯ್ಯಣ್ಣ ಉಳುವಾರು, ಲೋಕನಾಥ ಸಣ್ಣಮನೆ, ಪುನೀತ ಕೂಸಪ್ಪ ಸಣ್ಣಮನೆ, ಹುಕ್ರಪ್ಪಗೌಡ, ಸುಮಿತ್ರಗೌಡ ಉಳುವಾರು, ದಮಯಂತಿ ಕೇಶವಗೌಡ ಉಳುವಾರು, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…