ಊರುಬೈಲು ಸೇತುವೆ ತಾತ್ಕಾಲಿಕವಾಗಿ ದುರಸ್ತಿ

July 25, 2019
11:21 AM

ಸಂಪಾಜೆ : ಕಳೆದ ವರ್ಷದ ಕೊಡಗಿನ ಭೀಕರ ಜಲಪ್ರಳಯದಲ್ಲಿ ಹಾನಿಗೀಡಾದ ಊರುಬೈಲು ಸೇತುವೆಯನ್ನು ತಾತ್ಕಾಲಿಕವಾಗಿ ಜಿಲ್ಲಾಡಳಿತದ ವತಿಯಿಂದ ದುರಸ್ತಿಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವರ್ಷವೂ  ಮತ್ತೆ  ಸುರಿದ ಮಳೆಗೆ ಸೇತುವೆ ಕೊಚ್ಚಿಹೋಗಿತ್ತು. ಇದೀಗ ಸ್ಥಳೀಯರು ತಾತ್ಕಾಲಿಕವಾಗಿ  ದುರಸ್ತಿ ಮಾಡಿದ್ದಾರೆ.

ಮೊನ್ನೆ ದಿನ ಸುರಿದ ಭಾರೀ ಮಳೆಯಿಂದಾಗಿ ಮತ್ತೊಮ್ಮೆ ಊರುಬೈಲು ಸೇತುವೆಯಲ್ಲಿ ಮರದ ದಿಮ್ಮಿಗಳು ಕೊಚ್ಚಿಕೊಂಡು ಬಂದಿದ್ದು, ಸೇತುವೆ ಭಾಗಶ ಹಾನಿಗೀಡಾಗಿತ್ತು.
ಈ ಹಿನ್ನೆಲೆಯಲ್ಲಿ  ಸ್ಥಳೀಯ ನಾಯಕರಾದ ಸಂಪಾಜೆ ಪಯಸ್ವಿನಿ ಕೃ ಪ ಸ ಸಂಘದ ಅದ್ಯಕ್ಷ ಯನ್.ಅನಂತ್ ಅವರ ಮುಂದಾಳತ್ವ ದಲ್ಲಿ ಸ್ಥಳೀಯ ಯುವಕರು ಮತ್ತು ಶ್ರೀ ಭಗವಾನ್ ಸಂಘದ ಸದಸ್ಯರು ಶ್ರಮದಾನ ಮಾಡಿ, ಸೇತುವೆಯನ್ನು ದುರಸ್ತಿಗೊಳಿಸಿ ,ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಈ ಕಾರ್ಯದಲ್ಲಿ ಚೆಂಬು ಗ್ರಾಮ ಪಂಚಾಯತ್ ಸದಸ್ಯ ಮನೋಹರ್.ಯನ್.ಸಿ ಪಂಚಾಯತ್ ವತಿಯಿಂದ ಜೆಸಿಬಿ ವ್ಯವಸ್ಥೆ ಮಾಡಿಕೊಡುವ ಮೂಲಕ ಸಹಕರಿಸಿದರು.  ಇದರಿಂದಾಗಿ ಶಾಲಾಮಕ್ಕಳು,ಊರವರು ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.

ಕಳೆದ ಕೆಲವು ದಿನಗಳಿಂದ ಮಡಿಕೇರಿ, ಸಂಪಾಜೆ ಭಾಗಶ: ಪ್ರದೇಶ, ಮೊಣ್ಣಂಗೇರಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿತ್ತು. ಇದೇ ಸಂದರ್ಭ ಅಲ್ಲಲ್ಲಿ ಕುಸಿತ ಹಾಗೂ ಗುಡ್ಡದಲ್ಲಿದ್ದ ಕಳೆದ ವರ್ಷ ಹಾನಿಗೀಡಾದ ಪ್ರದೇಶದ ಮಣ್ಣು ಹಾಗೂ ಮರಗಳು  ನೀರಿನೊಂದಿಗೆ  ಕೊಚ್ಚಿಕೊಂಡು ಬಂದಿದ್ದವು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror