ಸುಬ್ರಹ್ಮಣ್ಯ : ಕೊರೊನಾ ಭೀತಿಯಿಂದ ಇಡೀ ದೇಶಕ್ಕೆ ದೇಶವೇ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಫ್ಯೂಗೆ ಕರೆ ನೀಡಿದ್ದು ದೇಶದ ಜನತೆ ಅಭೂತಪೂರ್ವವಾಗಿ ಸ್ಪಂದಿಸಿದ್ದಾರೆ. ಇದರ ಜೊತೆಗೆ ಮಾ.31 ರ ವರೆಗೆ ದಕ ಜಿಲ್ಲೆಯೂ ಸೇರಿದಂತೆ ದೇಶದ 74 ಜಿಲ್ಲೆಗಳು ಬಂದ್ ಆಗಲಿವೆ. ಮುಂಜಾಗ್ರತಾ ಕ್ರಮವಾಗಿ ದಕ ಜಿಲ್ಲೆಯಲ್ಲಿ ಮಾ.31 ರವರೆಗೆ ನಿಷೇಧಾಜ್ಞೆ ಜಾರಿಯಾಗಿದೆ.
ಹೀಗಿದ್ದರೂ ಸುಬ್ರಹ್ಮಣ್ಯದಲ್ಲಿ “ತಾಳೆಗಾರಿ ಸಂಶೋದನಾ ಶಿಬಿರ” ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಬಗ್ಗೆ ಸ್ಥಳಿಯ ಗ್ರಾಪಂ ಸದಸ್ಯ ಪ್ರಶಾಂತ್ ಭಟ್ ಅಧಿಕೃತ ಮಾಹಿತಿ ಪಡೆದು ಜಿಲ್ಲಾದಿಕಾರಿಗಳಿಗೆ ದೂರು ನೀಡಿದ್ದಾರೆ.
ಜಿಲ್ಲಾಡಳಿತ ಸಾಂಕ್ರಾಮಿಕ ರೋಗ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ಆದೇಶ ನೀಡಿದೆ. ಹೀಗಿದ್ದೂ ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತದ ವತಿಯಿಂದ ದೆಹಲಿ, ಹೈದರಾಬಾದ್ ಗಳ ಸುಮಾರು 30-40 ವ್ಯಕ್ತಿಗಳನ್ನು ಒಗ್ಗೂಡಿಸಿ ಶಿಬಿರ ನಡೆಸುತ್ತಿದೆ. ಹೀಗಾಗಿ ಗ್ರಾಮದ ಜನರ ಆರೋಗ್ಯದ ಹಿತದೃಷ್ಠಿಯಿಂದ ಪೋಲೀಸ್ ಇಲಾಖೆಗೆ, ಕಂದಾಯ ಇಲಾಖೆ, ಹಾಗೂ ಪಂಚಾಯತ್ ಆಡಳಿತದ ಗಮನಕ್ಕೆ ತರಲಾಗಿದೆ ಎಂದು ಪ್ರಶಾಂತ್ ಭಟ್ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಸುಬ್ರಹ್ಮಣ್ಯವು ರಾಜ್ಯದ ಪ್ರಸಿದ್ಧ ಧಾಮಿ೯ಕ ಕ್ಷೇತ್ರವಾಗಿದ್ದು ಶ್ರೀ ಸುಬ್ರಹ್ಮಣ್ಯ ದೇವರ ದಶ೯ನಕ್ಕೂ ಅವಕಾಶವಿಲ್ಲದಿರುವ ಬಿಗು ವಾತಾವರಣದಲ್ಲಿ ಹೊರ ರಾಜ್ಯಗಳಾದ ದೆಹಲಿ, ಹೈದರಾಬಾದ್ ನ ವ್ಯಕ್ತಿಗಳನ್ನು ಸೇರಿಸಿಕೊಂಡು ಶಿಬಿರ ನಡೆಸಿಕೊಂಡು ಕ್ಷೇತ್ರದ ನಾಗರೀಕರ ಜೀವದ ಜೊತೆ, ಕ್ಷೇತ್ರದ ಆರೋಗ್ಯದ ಬಗ್ಗೆ ಅಜಾಗರೂಕರಾಗಿ ಚೆಲ್ಲಾಟವಾಡುತ್ತಾ ಜಿಲ್ಲಾಡಳಿತ, ರಾಜ್ಯಸರಕಾರದ ಆದೇಶವನ್ನು ಗಾಳಿಗೆ ತೂರಿದವರ ಬಗ್ಗೆ ಯಾವುದೇ ಒತ್ತಡಕ್ಕೆ ಮಣಿಯದೇ ಜಿಲ್ಲಾಡಳಿತ ಸೂಕ್ತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಶಾಂತ್ ಭಟ್ ಒತ್ತಾಯ ಮಾಡಿದ್ದಾರೆ.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490