Advertisement
ಸುದ್ದಿಗಳು

ಊರೆಲ್ಲಾ ಕೊರೊನಾ ವೈರಸ್ ಗೆ ಭೀತಿಗೊಂಡಿದೆ | ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಿದೆ | ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದೆ ಶಿಬಿರ….! : ಜಿಲ್ಲಾಧಿಕಾರಿಗಳೇ ಇತ್ತ ಗಮನಿಸಿ |

Share

ಸುಬ್ರಹ್ಮಣ್ಯ : ಕೊರೊನಾ ಭೀತಿಯಿಂದ ಇಡೀ ದೇಶಕ್ಕೆ ದೇಶವೇ ಕೊರೊನಾ ವೈರಸ್ ವಿರುದ್ಧ  ಹೋರಾಡುತ್ತಿದೆ. ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಫ್ಯೂಗೆ ಕರೆ ನೀಡಿದ್ದು ದೇಶದ ಜನತೆ ಅಭೂತಪೂರ್ವವಾಗಿ ಸ್ಪಂದಿಸಿದ್ದಾರೆ. ಇದರ ಜೊತೆಗೆ ಮಾ.31 ರ ವರೆಗೆ ದಕ ಜಿಲ್ಲೆಯೂ ಸೇರಿದಂತೆ ದೇಶದ 74 ಜಿಲ್ಲೆಗಳು ಬಂದ್ ಆಗಲಿವೆ. ಮುಂಜಾಗ್ರತಾ ಕ್ರಮವಾಗಿ ದಕ ಜಿಲ್ಲೆಯಲ್ಲಿ ಮಾ.31 ರವರೆಗೆ  ನಿಷೇಧಾಜ್ಞೆ ಜಾರಿಯಾಗಿದೆ.

ಹೀಗಿದ್ದರೂ ಸುಬ್ರಹ್ಮಣ್ಯದಲ್ಲಿ “ತಾಳೆಗಾರಿ ಸಂಶೋದನಾ ಶಿಬಿರ”  ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಬಗ್ಗೆ ಸ್ಥಳಿಯ ಗ್ರಾಪಂ ಸದಸ್ಯ ಪ್ರಶಾಂತ್ ಭಟ್ ಅಧಿಕೃತ ಮಾಹಿತಿ ಪಡೆದು ಜಿಲ್ಲಾದಿಕಾರಿಗಳಿಗೆ ದೂರು ನೀಡಿದ್ದಾರೆ.

ಜಿಲ್ಲಾಡಳಿತ ಸಾಂಕ್ರಾಮಿಕ ರೋಗ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ಆದೇಶ ನೀಡಿದೆ. ಹೀಗಿದ್ದೂ ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತದ ವತಿಯಿಂದ  ದೆಹಲಿ, ಹೈದರಾಬಾದ್ ಗಳ ಸುಮಾರು 30-40 ವ್ಯಕ್ತಿಗಳನ್ನು ಒಗ್ಗೂಡಿಸಿ ಶಿಬಿರ ನಡೆಸುತ್ತಿದೆ. ಹೀಗಾಗಿ ಗ್ರಾಮದ ಜನರ ಆರೋಗ್ಯದ ಹಿತದೃಷ್ಠಿಯಿಂದ ಪೋಲೀಸ್ ಇಲಾಖೆಗೆ, ಕಂದಾಯ ಇಲಾಖೆ, ಹಾಗೂ ಪಂಚಾಯತ್ ಆಡಳಿತದ ಗಮನಕ್ಕೆ ತರಲಾಗಿದೆ ಎಂದು ಪ್ರಶಾಂತ್ ಭಟ್ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಸುಬ್ರಹ್ಮಣ್ಯವು ರಾಜ್ಯದ ಪ್ರಸಿದ್ಧ ಧಾಮಿ೯ಕ ಕ್ಷೇತ್ರವಾಗಿದ್ದು ಶ್ರೀ ಸುಬ್ರಹ್ಮಣ್ಯ ದೇವರ ದಶ೯ನಕ್ಕೂ ಅವಕಾಶವಿಲ್ಲದಿರುವ ಬಿಗು ವಾತಾವರಣದಲ್ಲಿ ಹೊರ ರಾಜ್ಯಗಳಾದ ದೆಹಲಿ, ಹೈದರಾಬಾದ್ ನ ವ್ಯಕ್ತಿಗಳನ್ನು ಸೇರಿಸಿಕೊಂಡು ಶಿಬಿರ ನಡೆಸಿಕೊಂಡು ಕ್ಷೇತ್ರದ ನಾಗರೀಕರ ಜೀವದ ಜೊತೆ, ಕ್ಷೇತ್ರದ ಆರೋಗ್ಯದ ಬಗ್ಗೆ ಅಜಾಗರೂಕರಾಗಿ ಚೆಲ್ಲಾಟವಾಡುತ್ತಾ ಜಿಲ್ಲಾಡಳಿತ, ರಾಜ್ಯಸರಕಾರದ ಆದೇಶವನ್ನು ಗಾಳಿಗೆ ತೂರಿದವರ ಬಗ್ಗೆ ಯಾವುದೇ ಒತ್ತಡಕ್ಕೆ ಮಣಿಯದೇ ಜಿಲ್ಲಾಡಳಿತ ಸೂಕ್ತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಶಾಂತ್ ಭಟ್ ಒತ್ತಾಯ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

5 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

6 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

8 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

8 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

16 hours ago