ಊರೆಲ್ಲಾ ಲಾಕ್ಡೌನ್ ಸಡಿಲಿಕೆ ಇದ್ದರೂ ಇಲ್ಲಿ ಮಧ್ಯಾಹ್ನವರೆಗೆ ಮಾತ್ರವೇ ಅಂಗಡಿ ತೆರೆಯುತ್ತದೆ….! | ಕೊರೊನಾದಿಂದ ರಕ್ಷಿಸಿಕೊಳ್ಳಲು ಹೆಜ್ಜೆ ಇರಿಸಿದ ಪಂಚಾಯತ್ | ಕೈ ಜೋಡಿಸಿದ ವರ್ತಕರು |

May 4, 2020
10:24 PM

ಸುಳ್ಯ: ಎಲ್ಲೆಡೆಯೂ ಒಂದೇ ಮಾತು…!. “ಲಾಕ್ಡೌನ್ ಸಡಿಲಿಕೆ ಪರಿಣಾಮ ಏನು…? ” ಎಲ್ಲರದೂ ಒಂದೇ ಉತ್ತರ.. ” ಕೆಲವೇ ದಿನಗಳಲ್ಲಿ  ಸೀಲ್ ಡೌನ್ ಖಚಿತ…! ” . ಹಾಗಿದ್ದರೆ ಪರಿಹಾರವೇನು….? . ಇದೊಂದು ಪಂಚಾಯತ್ ಪುಟ್ಟ ಹೆಜ್ಜೆ ಇರಿಸಿದೆ. ಇಲ್ಲಿನ ವರ್ತಕರೂ ಕೈಜೋಡಿಸಿದ್ದಾರೆ. ತಮ್ಮೂರಿನ ಜನರಿಗಾಗಿ. ಈ ಹೆಜ್ಜೆ ಎಲ್ಲೆಡೆಗೂ ಮಾದರಿಯೂ ಹೌದು.

ಸುಳ್ಯ ತಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರೆಲ್ಲರೂ ಈಗ ನಿರ್ಧಾರಕ್ಕೆ ಬಂದಿದ್ದಾರೆ,  ಮಂಗಳವಾರದಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ  ಅಂಗಡಿ ತೆರೆದು ವ್ಯವಹಾರ ನಡೆಸುವುದಾಗಿ ತೀರ್ಮಾನಿಸಿದ್ದಾರೆ. 1 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ತೀರ್ಮಾನಿಸಲಾಗಿದೆ.

ಸರಕಾರದ  ಆದೇಶದಂತೆ ಲಾಕ್ಡೌನ್ ಸಡಿಲಿಕೆಯಾಗಿದೆ. ಈ ಪ್ರಕಾರ ವಾಹನ ಓಡಾಟ ಸಹಿತ ಅಂಗಡಿಗಳು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ತೆರೆಯಬಹುದು. ಆದರೆ ಸಾಮಾಜಿಕ ಅಂತರ ಸಹಿತ ಎಲ್ಲಾ ನಿಯಮಗಳು ಕಡ್ಡಾಯ. ಹಾಗೆಂದು ಲಾಕ್ಡೌನ್ ನಿಯಮ ಸಡಿಲಿಕೆ ಸರಕಾರ ಮಾಡಿದರೂ ಎಲ್ಲರೂ ಎಚ್ಚರ ಅಗತ್ಯ. ಕೊರೊನಾ ವೈರಸ್ ನಿವಾರಣೆಯಾಗಿಲ್ಲ. ಇದುವರೆಗೆ ಕಟ್ಟುನಿಟ್ಟಾಗಿ ಲಾಕ್ಡೌನ್ ನಿಯಮ ಪಾಲನೆ ಮಾಡಿ ಇದೀಗ ಸಡಿಲಿಕೆಯೇ ಮಾರಕವಾಗಬಾರದು ಎಂದು ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಯೋಚನೆ ಮಾಡಿತು. ಈ ನೆಲೆಯಲ್ಲಿ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳನ್ನು ಕೊರೊನಾ ವೈರಸ್ ನಿಂದ ರಕ್ಷಿಸಿಕೊಳ್ಳುವ ದೃಷ್ಟಿಯಿಂದ ಅಂಗಡಿಗಳ ಸಮಯವನ್ನು ಈ ಮೊದಲಿನಂತೆ ನಿರ್ಭಂಧಿಸುವ  ಬಗ್ಗೆ ಪಂಚಾಯತ್ ವ್ಯಾಪ್ತಿಯ ವರ್ತಕರ ಸಭೆಯನ್ನು ಗ್ರಾಮಪಂಚಾಯತ್ ಸಭಾಭವನದಲ್ಲಿ ಕರೆಯಲಾಗಿತ್ತು.

ಈ ಸಭೆಯಲ್ಲಿ ವರ್ತಕರ ಅಭಿಪ್ರಾಯದಂತೆ ಅಂಗಡಿಗಳನ್ನು  ಮಂಗಳವಾರದಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ  ಅಂಗಡಿ ತೆರೆದು ವ್ಯವಹಾರ ನಡೆಸುವುದಾಗಿ ತೀರ್ಮಾನಿಸಿದ್ದಾರೆ. 1 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ತೀರ್ಮಾನಿಸಲಾಗಿದೆ.

ವರ್ತಕರ ಈ ನಡೆ ಈಗ ಎಲ್ಲೆಡೆಗೂ ಮಾದರಿಯಾಗಿದೆ. ಸರಕಾರ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿದೆ. ಅದು ಅನಿವಾರ್ಯವೂ ಹೌದು. ಆದರೆ ಗ್ರಾಮದ ಜನರ ರಕ್ಷಣೆಯ ದೃಷ್ಟಿಯಿಂದ ಆಯಾ ಗ್ರಾಮ ಪಂಚಾಯತ್ ಗಳು ಮುಂಜಾಗ್ರತೆ ವಹಿಸಿದರೆ ಕೊರೊನಾ ವೈರಸ್ ನಿಂದ ಎಲ್ಲರೂ ಪಾರಾಗಬಹುದಾಗಿದೆ. ಈ ನಿಟ್ಟಿನಲ್ಲಿ  ಯೋಚನೆ ನಡೆಯಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror