Advertisement
ಸುದ್ದಿಗಳು

ಊರೆಲ್ಲಾ ಲಾಕ್ಡೌನ್ ಸಡಿಲಿಕೆ ಇದ್ದರೂ ಇಲ್ಲಿ ಮಧ್ಯಾಹ್ನವರೆಗೆ ಮಾತ್ರವೇ ಅಂಗಡಿ ತೆರೆಯುತ್ತದೆ….! | ಕೊರೊನಾದಿಂದ ರಕ್ಷಿಸಿಕೊಳ್ಳಲು ಹೆಜ್ಜೆ ಇರಿಸಿದ ಪಂಚಾಯತ್ | ಕೈ ಜೋಡಿಸಿದ ವರ್ತಕರು |

Share

ಸುಳ್ಯ: ಎಲ್ಲೆಡೆಯೂ ಒಂದೇ ಮಾತು…!. “ಲಾಕ್ಡೌನ್ ಸಡಿಲಿಕೆ ಪರಿಣಾಮ ಏನು…? ” ಎಲ್ಲರದೂ ಒಂದೇ ಉತ್ತರ.. ” ಕೆಲವೇ ದಿನಗಳಲ್ಲಿ  ಸೀಲ್ ಡೌನ್ ಖಚಿತ…! ” . ಹಾಗಿದ್ದರೆ ಪರಿಹಾರವೇನು….? . ಇದೊಂದು ಪಂಚಾಯತ್ ಪುಟ್ಟ ಹೆಜ್ಜೆ ಇರಿಸಿದೆ. ಇಲ್ಲಿನ ವರ್ತಕರೂ ಕೈಜೋಡಿಸಿದ್ದಾರೆ. ತಮ್ಮೂರಿನ ಜನರಿಗಾಗಿ. ಈ ಹೆಜ್ಜೆ ಎಲ್ಲೆಡೆಗೂ ಮಾದರಿಯೂ ಹೌದು.

Advertisement
Advertisement
Advertisement
Advertisement

ಸುಳ್ಯ ತಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರೆಲ್ಲರೂ ಈಗ ನಿರ್ಧಾರಕ್ಕೆ ಬಂದಿದ್ದಾರೆ,  ಮಂಗಳವಾರದಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ  ಅಂಗಡಿ ತೆರೆದು ವ್ಯವಹಾರ ನಡೆಸುವುದಾಗಿ ತೀರ್ಮಾನಿಸಿದ್ದಾರೆ. 1 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ತೀರ್ಮಾನಿಸಲಾಗಿದೆ.

Advertisement

ಸರಕಾರದ  ಆದೇಶದಂತೆ ಲಾಕ್ಡೌನ್ ಸಡಿಲಿಕೆಯಾಗಿದೆ. ಈ ಪ್ರಕಾರ ವಾಹನ ಓಡಾಟ ಸಹಿತ ಅಂಗಡಿಗಳು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ತೆರೆಯಬಹುದು. ಆದರೆ ಸಾಮಾಜಿಕ ಅಂತರ ಸಹಿತ ಎಲ್ಲಾ ನಿಯಮಗಳು ಕಡ್ಡಾಯ. ಹಾಗೆಂದು ಲಾಕ್ಡೌನ್ ನಿಯಮ ಸಡಿಲಿಕೆ ಸರಕಾರ ಮಾಡಿದರೂ ಎಲ್ಲರೂ ಎಚ್ಚರ ಅಗತ್ಯ. ಕೊರೊನಾ ವೈರಸ್ ನಿವಾರಣೆಯಾಗಿಲ್ಲ. ಇದುವರೆಗೆ ಕಟ್ಟುನಿಟ್ಟಾಗಿ ಲಾಕ್ಡೌನ್ ನಿಯಮ ಪಾಲನೆ ಮಾಡಿ ಇದೀಗ ಸಡಿಲಿಕೆಯೇ ಮಾರಕವಾಗಬಾರದು ಎಂದು ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಯೋಚನೆ ಮಾಡಿತು. ಈ ನೆಲೆಯಲ್ಲಿ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳನ್ನು ಕೊರೊನಾ ವೈರಸ್ ನಿಂದ ರಕ್ಷಿಸಿಕೊಳ್ಳುವ ದೃಷ್ಟಿಯಿಂದ ಅಂಗಡಿಗಳ ಸಮಯವನ್ನು ಈ ಮೊದಲಿನಂತೆ ನಿರ್ಭಂಧಿಸುವ  ಬಗ್ಗೆ ಪಂಚಾಯತ್ ವ್ಯಾಪ್ತಿಯ ವರ್ತಕರ ಸಭೆಯನ್ನು ಗ್ರಾಮಪಂಚಾಯತ್ ಸಭಾಭವನದಲ್ಲಿ ಕರೆಯಲಾಗಿತ್ತು.

ಈ ಸಭೆಯಲ್ಲಿ ವರ್ತಕರ ಅಭಿಪ್ರಾಯದಂತೆ ಅಂಗಡಿಗಳನ್ನು  ಮಂಗಳವಾರದಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ  ಅಂಗಡಿ ತೆರೆದು ವ್ಯವಹಾರ ನಡೆಸುವುದಾಗಿ ತೀರ್ಮಾನಿಸಿದ್ದಾರೆ. 1 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ತೀರ್ಮಾನಿಸಲಾಗಿದೆ.

Advertisement

ವರ್ತಕರ ಈ ನಡೆ ಈಗ ಎಲ್ಲೆಡೆಗೂ ಮಾದರಿಯಾಗಿದೆ. ಸರಕಾರ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿದೆ. ಅದು ಅನಿವಾರ್ಯವೂ ಹೌದು. ಆದರೆ ಗ್ರಾಮದ ಜನರ ರಕ್ಷಣೆಯ ದೃಷ್ಟಿಯಿಂದ ಆಯಾ ಗ್ರಾಮ ಪಂಚಾಯತ್ ಗಳು ಮುಂಜಾಗ್ರತೆ ವಹಿಸಿದರೆ ಕೊರೊನಾ ವೈರಸ್ ನಿಂದ ಎಲ್ಲರೂ ಪಾರಾಗಬಹುದಾಗಿದೆ. ಈ ನಿಟ್ಟಿನಲ್ಲಿ  ಯೋಚನೆ ನಡೆಯಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

7 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

7 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

8 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

17 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

17 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

17 hours ago