Advertisement
ಸುದ್ದಿಗಳು

ಊರೆಲ್ಲಾ ಲಾಕ್ಡೌನ್ ಸಡಿಲಿಕೆ ಇದ್ದರೂ ಇಲ್ಲಿ ಮಧ್ಯಾಹ್ನವರೆಗೆ ಮಾತ್ರವೇ ಅಂಗಡಿ ತೆರೆಯುತ್ತದೆ….! | ಕೊರೊನಾದಿಂದ ರಕ್ಷಿಸಿಕೊಳ್ಳಲು ಹೆಜ್ಜೆ ಇರಿಸಿದ ಪಂಚಾಯತ್ | ಕೈ ಜೋಡಿಸಿದ ವರ್ತಕರು |

Share

ಸುಳ್ಯ: ಎಲ್ಲೆಡೆಯೂ ಒಂದೇ ಮಾತು…!. “ಲಾಕ್ಡೌನ್ ಸಡಿಲಿಕೆ ಪರಿಣಾಮ ಏನು…? ” ಎಲ್ಲರದೂ ಒಂದೇ ಉತ್ತರ.. ” ಕೆಲವೇ ದಿನಗಳಲ್ಲಿ  ಸೀಲ್ ಡೌನ್ ಖಚಿತ…! ” . ಹಾಗಿದ್ದರೆ ಪರಿಹಾರವೇನು….? . ಇದೊಂದು ಪಂಚಾಯತ್ ಪುಟ್ಟ ಹೆಜ್ಜೆ ಇರಿಸಿದೆ. ಇಲ್ಲಿನ ವರ್ತಕರೂ ಕೈಜೋಡಿಸಿದ್ದಾರೆ. ತಮ್ಮೂರಿನ ಜನರಿಗಾಗಿ. ಈ ಹೆಜ್ಜೆ ಎಲ್ಲೆಡೆಗೂ ಮಾದರಿಯೂ ಹೌದು.

ಸುಳ್ಯ ತಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರೆಲ್ಲರೂ ಈಗ ನಿರ್ಧಾರಕ್ಕೆ ಬಂದಿದ್ದಾರೆ,  ಮಂಗಳವಾರದಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ  ಅಂಗಡಿ ತೆರೆದು ವ್ಯವಹಾರ ನಡೆಸುವುದಾಗಿ ತೀರ್ಮಾನಿಸಿದ್ದಾರೆ. 1 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ತೀರ್ಮಾನಿಸಲಾಗಿದೆ.

ಸರಕಾರದ  ಆದೇಶದಂತೆ ಲಾಕ್ಡೌನ್ ಸಡಿಲಿಕೆಯಾಗಿದೆ. ಈ ಪ್ರಕಾರ ವಾಹನ ಓಡಾಟ ಸಹಿತ ಅಂಗಡಿಗಳು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ತೆರೆಯಬಹುದು. ಆದರೆ ಸಾಮಾಜಿಕ ಅಂತರ ಸಹಿತ ಎಲ್ಲಾ ನಿಯಮಗಳು ಕಡ್ಡಾಯ. ಹಾಗೆಂದು ಲಾಕ್ಡೌನ್ ನಿಯಮ ಸಡಿಲಿಕೆ ಸರಕಾರ ಮಾಡಿದರೂ ಎಲ್ಲರೂ ಎಚ್ಚರ ಅಗತ್ಯ. ಕೊರೊನಾ ವೈರಸ್ ನಿವಾರಣೆಯಾಗಿಲ್ಲ. ಇದುವರೆಗೆ ಕಟ್ಟುನಿಟ್ಟಾಗಿ ಲಾಕ್ಡೌನ್ ನಿಯಮ ಪಾಲನೆ ಮಾಡಿ ಇದೀಗ ಸಡಿಲಿಕೆಯೇ ಮಾರಕವಾಗಬಾರದು ಎಂದು ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಯೋಚನೆ ಮಾಡಿತು. ಈ ನೆಲೆಯಲ್ಲಿ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳನ್ನು ಕೊರೊನಾ ವೈರಸ್ ನಿಂದ ರಕ್ಷಿಸಿಕೊಳ್ಳುವ ದೃಷ್ಟಿಯಿಂದ ಅಂಗಡಿಗಳ ಸಮಯವನ್ನು ಈ ಮೊದಲಿನಂತೆ ನಿರ್ಭಂಧಿಸುವ  ಬಗ್ಗೆ ಪಂಚಾಯತ್ ವ್ಯಾಪ್ತಿಯ ವರ್ತಕರ ಸಭೆಯನ್ನು ಗ್ರಾಮಪಂಚಾಯತ್ ಸಭಾಭವನದಲ್ಲಿ ಕರೆಯಲಾಗಿತ್ತು.

ಈ ಸಭೆಯಲ್ಲಿ ವರ್ತಕರ ಅಭಿಪ್ರಾಯದಂತೆ ಅಂಗಡಿಗಳನ್ನು  ಮಂಗಳವಾರದಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ  ಅಂಗಡಿ ತೆರೆದು ವ್ಯವಹಾರ ನಡೆಸುವುದಾಗಿ ತೀರ್ಮಾನಿಸಿದ್ದಾರೆ. 1 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ತೀರ್ಮಾನಿಸಲಾಗಿದೆ.

ವರ್ತಕರ ಈ ನಡೆ ಈಗ ಎಲ್ಲೆಡೆಗೂ ಮಾದರಿಯಾಗಿದೆ. ಸರಕಾರ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿದೆ. ಅದು ಅನಿವಾರ್ಯವೂ ಹೌದು. ಆದರೆ ಗ್ರಾಮದ ಜನರ ರಕ್ಷಣೆಯ ದೃಷ್ಟಿಯಿಂದ ಆಯಾ ಗ್ರಾಮ ಪಂಚಾಯತ್ ಗಳು ಮುಂಜಾಗ್ರತೆ ವಹಿಸಿದರೆ ಕೊರೊನಾ ವೈರಸ್ ನಿಂದ ಎಲ್ಲರೂ ಪಾರಾಗಬಹುದಾಗಿದೆ. ಈ ನಿಟ್ಟಿನಲ್ಲಿ  ಯೋಚನೆ ನಡೆಯಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

5 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

14 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

15 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

16 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

19 hours ago