Advertisement
ಸುದ್ದಿಗಳು

ಊರೆಲ್ಲಾ ಲಾಕ್ಡೌನ್ ಸಡಿಲಿಕೆ ಇದ್ದರೂ ಇಲ್ಲಿ ಮಧ್ಯಾಹ್ನವರೆಗೆ ಮಾತ್ರವೇ ಅಂಗಡಿ ತೆರೆಯುತ್ತದೆ….! | ಕೊರೊನಾದಿಂದ ರಕ್ಷಿಸಿಕೊಳ್ಳಲು ಹೆಜ್ಜೆ ಇರಿಸಿದ ಪಂಚಾಯತ್ | ಕೈ ಜೋಡಿಸಿದ ವರ್ತಕರು |

Share

ಸುಳ್ಯ: ಎಲ್ಲೆಡೆಯೂ ಒಂದೇ ಮಾತು…!. “ಲಾಕ್ಡೌನ್ ಸಡಿಲಿಕೆ ಪರಿಣಾಮ ಏನು…? ” ಎಲ್ಲರದೂ ಒಂದೇ ಉತ್ತರ.. ” ಕೆಲವೇ ದಿನಗಳಲ್ಲಿ  ಸೀಲ್ ಡೌನ್ ಖಚಿತ…! ” . ಹಾಗಿದ್ದರೆ ಪರಿಹಾರವೇನು….? . ಇದೊಂದು ಪಂಚಾಯತ್ ಪುಟ್ಟ ಹೆಜ್ಜೆ ಇರಿಸಿದೆ. ಇಲ್ಲಿನ ವರ್ತಕರೂ ಕೈಜೋಡಿಸಿದ್ದಾರೆ. ತಮ್ಮೂರಿನ ಜನರಿಗಾಗಿ. ಈ ಹೆಜ್ಜೆ ಎಲ್ಲೆಡೆಗೂ ಮಾದರಿಯೂ ಹೌದು.

ಸುಳ್ಯ ತಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರೆಲ್ಲರೂ ಈಗ ನಿರ್ಧಾರಕ್ಕೆ ಬಂದಿದ್ದಾರೆ,  ಮಂಗಳವಾರದಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ  ಅಂಗಡಿ ತೆರೆದು ವ್ಯವಹಾರ ನಡೆಸುವುದಾಗಿ ತೀರ್ಮಾನಿಸಿದ್ದಾರೆ. 1 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ತೀರ್ಮಾನಿಸಲಾಗಿದೆ.

ಸರಕಾರದ  ಆದೇಶದಂತೆ ಲಾಕ್ಡೌನ್ ಸಡಿಲಿಕೆಯಾಗಿದೆ. ಈ ಪ್ರಕಾರ ವಾಹನ ಓಡಾಟ ಸಹಿತ ಅಂಗಡಿಗಳು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ತೆರೆಯಬಹುದು. ಆದರೆ ಸಾಮಾಜಿಕ ಅಂತರ ಸಹಿತ ಎಲ್ಲಾ ನಿಯಮಗಳು ಕಡ್ಡಾಯ. ಹಾಗೆಂದು ಲಾಕ್ಡೌನ್ ನಿಯಮ ಸಡಿಲಿಕೆ ಸರಕಾರ ಮಾಡಿದರೂ ಎಲ್ಲರೂ ಎಚ್ಚರ ಅಗತ್ಯ. ಕೊರೊನಾ ವೈರಸ್ ನಿವಾರಣೆಯಾಗಿಲ್ಲ. ಇದುವರೆಗೆ ಕಟ್ಟುನಿಟ್ಟಾಗಿ ಲಾಕ್ಡೌನ್ ನಿಯಮ ಪಾಲನೆ ಮಾಡಿ ಇದೀಗ ಸಡಿಲಿಕೆಯೇ ಮಾರಕವಾಗಬಾರದು ಎಂದು ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಯೋಚನೆ ಮಾಡಿತು. ಈ ನೆಲೆಯಲ್ಲಿ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮಗಳನ್ನು ಕೊರೊನಾ ವೈರಸ್ ನಿಂದ ರಕ್ಷಿಸಿಕೊಳ್ಳುವ ದೃಷ್ಟಿಯಿಂದ ಅಂಗಡಿಗಳ ಸಮಯವನ್ನು ಈ ಮೊದಲಿನಂತೆ ನಿರ್ಭಂಧಿಸುವ  ಬಗ್ಗೆ ಪಂಚಾಯತ್ ವ್ಯಾಪ್ತಿಯ ವರ್ತಕರ ಸಭೆಯನ್ನು ಗ್ರಾಮಪಂಚಾಯತ್ ಸಭಾಭವನದಲ್ಲಿ ಕರೆಯಲಾಗಿತ್ತು.

ಈ ಸಭೆಯಲ್ಲಿ ವರ್ತಕರ ಅಭಿಪ್ರಾಯದಂತೆ ಅಂಗಡಿಗಳನ್ನು  ಮಂಗಳವಾರದಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ  ಅಂಗಡಿ ತೆರೆದು ವ್ಯವಹಾರ ನಡೆಸುವುದಾಗಿ ತೀರ್ಮಾನಿಸಿದ್ದಾರೆ. 1 ಗಂಟೆಗೆ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ತೀರ್ಮಾನಿಸಲಾಗಿದೆ.

ವರ್ತಕರ ಈ ನಡೆ ಈಗ ಎಲ್ಲೆಡೆಗೂ ಮಾದರಿಯಾಗಿದೆ. ಸರಕಾರ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿದೆ. ಅದು ಅನಿವಾರ್ಯವೂ ಹೌದು. ಆದರೆ ಗ್ರಾಮದ ಜನರ ರಕ್ಷಣೆಯ ದೃಷ್ಟಿಯಿಂದ ಆಯಾ ಗ್ರಾಮ ಪಂಚಾಯತ್ ಗಳು ಮುಂಜಾಗ್ರತೆ ವಹಿಸಿದರೆ ಕೊರೊನಾ ವೈರಸ್ ನಿಂದ ಎಲ್ಲರೂ ಪಾರಾಗಬಹುದಾಗಿದೆ. ಈ ನಿಟ್ಟಿನಲ್ಲಿ  ಯೋಚನೆ ನಡೆಯಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

2 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

12 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

17 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago