Advertisement
ಸುದ್ದಿಗಳು

ಋಣಮುಕ್ತ ಕಾಯಿದೆ ಅನುಷ್ಠಾನ ಮಾಡುವ ಇಚ್ಛಾಶಕ್ತಿ ತೋರ್ಪಡಿಸಿ-ಎಂ.ಬಿ.ಸದಾಶಿವ

Share

ಸುಳ್ಯ: ರಾಜ್ಯದಲ್ಲಿ ಋಣಮುಕ್ತ ಕಾಯಿದೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಮತ್ತು ಜನಪ್ರತಿನಿಧಿಗಳು ತೋರ್ಪಡಿಸಲಿ ಎಂದು ಜಿಲ್ಲಾ ಋಣಮುಕ್ತ ಕಾಯಿದೆ ಅನುಷ್ಠಾನ ಕ್ರಿಯಾ ಸಮಿತಿಯ ಅಧ್ಯಕ್ಷ ಎಂ.ಬಿ.ಸದಾಶಿವ ಆಗ್ರಹಿಸಿದ್ದಾರೆ.

ಋಣಮುಕ್ತ ಕಾಯಿದೆ ಅನುಷ್ಠಾನ ಕ್ರಿಯಾ ಸಮಿತಿಯ ವತಿಯಿಂದ ಸುಳ್ಯದಲ್ಲಿ ನಡೆದ ವಿವಿಧ ಕಿರು ಹಣಕಾಸು ಸಂಸ್ಥೆಗಳ ಸಾಲಗಾರ ಸದಸ್ಯರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಿರು ಹಣಕಾಸು ಸಂಸ್ಥೆಗಳನ್ನು ಋಣಮುಕ್ತ ಕಾಯಿದೆಯಡಿಯಲ್ಲಿ ತರಬೇಕು, ಕಿರು ಹಣಕಾಸು ಸಂಸ್ಥೆಗಳಿಂದ ಮಹಿಳೆಯರು ಮತ್ತು ಬಡವರು ಪಡೆದ ಎಲ್ಲಾ ಸಾಲವನ್ನು ಸರ್ಕಾರ ಸಂಪೂರ್ಣ ಮನ್ನಾ ಮಾಡಿ ಇವರನ್ನು ಋಣ ಮುಕ್ತರನ್ನಾಗಿ ಮಾಡಬೇಕು. ಜೊತೆಗೆ ಸರಕಾರವು ಎನ್‍ಆರ್ ಎಲ್ ಎಂ ಯೋಜನೆಯನ್ನು ಅನುಷ್ಠಾನ ಮಾಡುವ ಮೂಲಕ ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಗುಂಪು ಸಾಲಗಳನ್ನು ನೀಡುವ ವ್ಯವಸ್ಥೆ ಆಗಬೇಕು ಎಂದು ಅವರು ಒತ್ತಾಯಿಸಿದರು.

ಈಗ ಆರ್ಥಿಕ ಹಿಂಜರಿತದಿಂದ ಉದ್ಯೋಗ, ಆದಾಯ ಇಲ್ಲದೆ ಕಿರು ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಮರು ಪಾವತಿ ಮಾಡಲಾಗದೆ ಜನರು ಹತಾಶೆಯಲ್ಲಿದ್ದಾರೆ. ಹಾಗಿದ್ದರೂ ಕಿರು ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿ ಕ್ರಮ ಅಮಾನವೀಯವಾಗಿದೆ. ಇದನ್ನು ನಿಯಂತ್ರಿಸಬೇಕು ಎಂದು ಅವರು ಹೇಳಿದರು. ಎನ್‍ಆರ್ ಎಲ್ ಎಂ ಯೋಜನೆಯ ಬಗ್ಗೆ ಮಾಹಿತಿ ನೀಡಲು ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸುಳ್ಯ ತಾಲೂಕಿನಲ್ಲಿ ನಾಲ್ಕು ಕಡೆಗಳಲ್ಲಿ ಸಭೆ ನಡೆಸಲಾಗುವುದು ಎಂದರು.

ಸಿಪಿಐಎಂ ಮುಖಂಡ ಬಿ.ಎಂ.ಭಟ್ ಸಮಾವೇಶವನ್ನು ಉದ್ಘಾಟಿಸಿ ಋಣ ಮುಕ್ತ ಕಾನೂನಿನ ಕುರಿತು ಮಾಹಿತಿ ನೀಡಿದರು. ಋಣ ಮುಕ್ತ ಕಾನೂನು ಯಶಸ್ವಿಯಾಗಿ ಅನುಷ್ಠಾನ ಆಗಿ ಬಡ ಮತ್ತು ಮಧ್ಯಮ ವರ್ಗದ ಜನರು ಸಂಪೂರ್ಣ ಋಣ ಮುಕ್ತರಾಗಿಸುವ ನೆಲೆಯಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ಮಾತನಾಡಿ `ಋಣಮುಕ್ತ ಕಾಯಿದೆ ಅನುಷ್ಠಾನಕ್ಕೆ ಮತ್ತು ಸಾಲದ ಶೂಲದಿಂದ ಹೊರ ಬರಲು ಜನರು ಸಂಘಟಿತರಾಗಿ ಹೋರಾಟ ನಡೆಸಬೇಕಾಗಿದೆ. ಜಿಲ್ಲಾಧಿಕಾರಿ, ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಅರಿತು ಅದರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  ದಲಿತ ಸಂಘರ್ಷ ಸಮಿತಿಯ ಮುಖಂಡ ಆನಂದ ಬೆಳ್ಳಾರೆ, ಪ್ರಮುಖರಾದ ಸಚಿನ್ ರಾಜ್ ಶೆಟ್ಟಿ, ಡಿ.ಎಂ.ಶಾರೀಖ್, ಮಜೀದ್, ನೇಮಿರಾಜ್, ಮಂಜುನಾಥ್, ಇಸ್ಮಾಯಿಲ್, ಮಹಾಬಲ ರೈ, ರಝಾಕ್ ಮಾತನಾಡಿದರು. ಋಣಮುಕ್ತ ಕಾಯಿದೆ ಅನುಷ್ಠಾನ ಕ್ರಿಯಾ ಸಮಿತಿಯ ಸುಳ್ಯ ತಾಲೂಕು ಸಂಚಾಲಕ ಹಸೈನಾರ್ ಜಯನಗರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

21 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

22 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago