Advertisement
ಸುದ್ದಿಗಳು

ಋಣ ಪರಿಹಾರ ಕಾಯ್ದೆ ಬಗ್ಗೆ ಇಲಾಖೆಯಿಂದ ಸ್ಪಷ್ಟನೆ :

Share

ಪುತ್ತೂರು: ಖಾಸಗಿ ಲೇವಾದೇವಿದಾರರಿಂದ ಮತ್ತು ನೋಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. ಅಲ್ಲದೆ, ಕರ್ನಾಟಕ  ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ , ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ ,  ಜಿಲ್ಲಾ ಆಡಳಿತ ಅಥವಾ ತಾಲೂಕು ಆಡಳಿತ ಹೊಣೆ ಆಗಿರುವುದಿಲ್ಲ ಎಂದು ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.

Advertisement

ಋಣಮುಕ್ತ ಕಾಯ್ದೆಯನ್ವಯ ಖಾಸಗಿ  ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಈಗ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ.

ಈ ಬಗ್ಗೆ ಸ್ಪಷ್ಟವಾಗಿ ಈ ರೀತಿ ತಿಳಿದುಕೊಳ್ಳಬೇಕು, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೋಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು , ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. ಖಾಸಗಿ ಲೇವಾದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

32 minutes ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

8 hours ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

8 hours ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

8 hours ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

8 hours ago

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ…

8 hours ago