ಸುದ್ದಿಗಳು

ಋಣ ಪರಿಹಾರ ಕಾಯ್ದೆ ಬಗ್ಗೆ ಇಲಾಖೆಯಿಂದ ಸ್ಪಷ್ಟನೆ :

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಖಾಸಗಿ ಲೇವಾದೇವಿದಾರರಿಂದ ಮತ್ತು ನೋಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. ಅಲ್ಲದೆ, ಕರ್ನಾಟಕ  ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ , ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ ,  ಜಿಲ್ಲಾ ಆಡಳಿತ ಅಥವಾ ತಾಲೂಕು ಆಡಳಿತ ಹೊಣೆ ಆಗಿರುವುದಿಲ್ಲ ಎಂದು ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.

Advertisement
Advertisement

ಋಣಮುಕ್ತ ಕಾಯ್ದೆಯನ್ವಯ ಖಾಸಗಿ  ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಈಗ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ.

ಈ ಬಗ್ಗೆ ಸ್ಪಷ್ಟವಾಗಿ ಈ ರೀತಿ ತಿಳಿದುಕೊಳ್ಳಬೇಕು, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೋಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು , ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. ಖಾಸಗಿ ಲೇವಾದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

21 minutes ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

37 minutes ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

55 minutes ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

8 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

13 hours ago