Advertisement
ಸುದ್ದಿಗಳು

ಋಣ ಪರಿಹಾರ ಕಾಯ್ದೆ ಬಗ್ಗೆ ಇಲಾಖೆಯಿಂದ ಸ್ಪಷ್ಟನೆ :

Share

ಪುತ್ತೂರು: ಖಾಸಗಿ ಲೇವಾದೇವಿದಾರರಿಂದ ಮತ್ತು ನೋಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. ಅಲ್ಲದೆ, ಕರ್ನಾಟಕ  ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ , ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ ,  ಜಿಲ್ಲಾ ಆಡಳಿತ ಅಥವಾ ತಾಲೂಕು ಆಡಳಿತ ಹೊಣೆ ಆಗಿರುವುದಿಲ್ಲ ಎಂದು ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.

ಋಣಮುಕ್ತ ಕಾಯ್ದೆಯನ್ವಯ ಖಾಸಗಿ  ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಈಗ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ.

ಈ ಬಗ್ಗೆ ಸ್ಪಷ್ಟವಾಗಿ ಈ ರೀತಿ ತಿಳಿದುಕೊಳ್ಳಬೇಕು, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೋಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು , ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. ಖಾಸಗಿ ಲೇವಾದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

15 minutes ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

42 minutes ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

11 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago