ಪುತ್ತೂರು: ಖಾಸಗಿ ಲೇವಾದೇವಿದಾರರಿಂದ ಮತ್ತು ನೋಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. ಅಲ್ಲದೆ, ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ , ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ , ಜಿಲ್ಲಾ ಆಡಳಿತ ಅಥವಾ ತಾಲೂಕು ಆಡಳಿತ ಹೊಣೆ ಆಗಿರುವುದಿಲ್ಲ ಎಂದು ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.
ಋಣಮುಕ್ತ ಕಾಯ್ದೆಯನ್ವಯ ಖಾಸಗಿ ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಈಗ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ.
ಈ ಬಗ್ಗೆ ಸ್ಪಷ್ಟವಾಗಿ ಈ ರೀತಿ ತಿಳಿದುಕೊಳ್ಳಬೇಕು, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೋಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು , ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. ಖಾಸಗಿ ಲೇವಾದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…