Advertisement
ಸುದ್ದಿಗಳು

ಋಣ ಪರಿಹಾರ ಕಾಯ್ದೆ ಬಗ್ಗೆ ಇಲಾಖೆಯಿಂದ ಸ್ಪಷ್ಟನೆ :

Share

ಪುತ್ತೂರು: ಖಾಸಗಿ ಲೇವಾದೇವಿದಾರರಿಂದ ಮತ್ತು ನೋಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. ಅಲ್ಲದೆ, ಕರ್ನಾಟಕ  ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ , ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ ,  ಜಿಲ್ಲಾ ಆಡಳಿತ ಅಥವಾ ತಾಲೂಕು ಆಡಳಿತ ಹೊಣೆ ಆಗಿರುವುದಿಲ್ಲ ಎಂದು ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.

ಋಣಮುಕ್ತ ಕಾಯ್ದೆಯನ್ವಯ ಖಾಸಗಿ  ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಈಗ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ.

ಈ ಬಗ್ಗೆ ಸ್ಪಷ್ಟವಾಗಿ ಈ ರೀತಿ ತಿಳಿದುಕೊಳ್ಳಬೇಕು, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೋಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು , ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. ಖಾಸಗಿ ಲೇವಾದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

6 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

10 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

20 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

21 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

21 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

1 day ago