Advertisement
ಸುದ್ದಿಗಳು

ಎಂಬಿಎ ಪದವೀಧರ ಬಾಂಬ್ ಇಡುವ ಕೆಲಸ ಮಾಡಿದ್ದೇಕೆ…?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಂಕಿತ ಆರೋಪಿ ಎಂಬಿಎ ಪದವೀಧರ ಮಣಿಪಾಲ ಮೂಲದ 34 ವರ್ಷದ  ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಎಂಬಿಎ ಪದವೀಧರನಾಗಿ ಆತ ಈ ಕೆಲಸ ಮಾಡಿದ್ದೇಕೆ ?.

ಇಂಜಿನಿಯರಿಂಗ್ ಪದವಿಯ ಬಳಿಕ ಎಂಬಿಎ ಓದಿರುವ ಆದಿತ್ಯ ರಾವ್ ಕೆಲಸವಿಲ್ಲದೆ ಓಡಾಟ ನಡೆಸುತ್ತಿದ್ದ. ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಯ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ತಾಂತ್ರಿಕ ಕಾರಣಗಳಿಂದ ಆತನ ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ಮಾನಸಿಕವಾಗಿ ನೊಂದಿದ್ದ ಇದರಿಂದ 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ. ಒಟ್ಟು ಮೂರು ಹುಸಿ ಬೆದರಿಕೆ ಕರೆಗಳನ್ನು ಮಾಡಿದ್ದ ಆತನನ್ನು 2018ರ ಆಗಸ್ಟ್‌ 29ರಂದು ಬಂಧಿಸಲಾಗಿತ್ತು. ನಂತರ ಆತನ ಬಿಡುಗಡೆಯಾಗಿದ್ದ. ಅದಾದ ಬಳಿಕ ಮಣಿಪಾಲದಲ್ಲಿ  ಕೆಲ ಸಮಯ ಇದ್ದು ನಂತರ ಮಂಗಳೂರಿನಲ್ಲಿ  ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿದ್ದ. ಹೋಟೆಲ್ ನಲ್ಲಿ ಸಪ್ಲೈ ಕೆಲಸಕ್ಕೆ ಬಂದವನಿಗೆ ಓದಿನ ಅರ್ಹತೆ ನೋಡಿ ಬಿಲ್ ಮಾಡುವ ಕೆಲಸ ನೀಡಿದ್ದರು. ಹೆಚ್ಚು ಮಾತನಾಡದ ಆದಿತ್ಯ ರಾವ್ ತನ್ನ ಪಾಡಿಗೆ ಇದ್ದ ಎಂದು ತಿಳಿದುಬಂದಿದೆ. ಇದೀಗ ಬಾಂಬ್ ಇರಿಸಿ ಪೊಲೀಸ್ ಅತಿಥಿಯಾಗಿದ್ದಾನೆ.

ಬಾಂಬ್ ತಯಾರು ಮಾಡಿದ್ದು ಹಾಗೂ ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳ ಪ್ರಕಾರ ಈತ ಯೂಟೂಬ್ ನೋಡಿ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದು, ಆನ್ ಲೈನ್ ಮೂಲಕವೇ ಅದಕ್ಕೆ ಬೇಕಾದ ವಸ್ತುಗಳನ್ನು ತರಿಸಿದ್ದ ಇದಕ್ಕಾಗಿ ಹಲವು ಬಾರಿ ಪ್ರಯತ್ನ ಮಾಡಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಇರಿಸಿದ ಬಳಿಕ ಮಾರುವೇಷದಲ್ಲಿ  ಬೆಂಗಳೂರಿಗೆ ತೆರಳಿದ್ದ ಬಳಿಕ ಭಯಗೊಂಡು ಮಂಗಳವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದ.  ಮನೆಯವರೊಂದಿಗೆ ಹೆಚ್ಚು ಸಂಪರ್ಕವಿಲ್ಲದೆ ಆದಿತ್ಯ ತನ್ನ ಪಾಡಿಗೆ ಇದ್ದ. ಉದ್ಯೋಗದ ಹುಡುಕಾಟ ಎಂದು ಮನೆಯಲ್ಲಿ  ಹೇಳುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

37 minutes ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

57 minutes ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

2 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

2 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

2 hours ago

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

6 hours ago