Advertisement
ಸುದ್ದಿಗಳು

ಎಂಬಿಎ ಪದವೀಧರ ಬಾಂಬ್ ಇಡುವ ಕೆಲಸ ಮಾಡಿದ್ದೇಕೆ…?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಂಕಿತ ಆರೋಪಿ ಎಂಬಿಎ ಪದವೀಧರ ಮಣಿಪಾಲ ಮೂಲದ 34 ವರ್ಷದ  ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಎಂಬಿಎ ಪದವೀಧರನಾಗಿ ಆತ ಈ ಕೆಲಸ ಮಾಡಿದ್ದೇಕೆ ?.

ಇಂಜಿನಿಯರಿಂಗ್ ಪದವಿಯ ಬಳಿಕ ಎಂಬಿಎ ಓದಿರುವ ಆದಿತ್ಯ ರಾವ್ ಕೆಲಸವಿಲ್ಲದೆ ಓಡಾಟ ನಡೆಸುತ್ತಿದ್ದ. ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಯ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ತಾಂತ್ರಿಕ ಕಾರಣಗಳಿಂದ ಆತನ ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ಮಾನಸಿಕವಾಗಿ ನೊಂದಿದ್ದ ಇದರಿಂದ 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ. ಒಟ್ಟು ಮೂರು ಹುಸಿ ಬೆದರಿಕೆ ಕರೆಗಳನ್ನು ಮಾಡಿದ್ದ ಆತನನ್ನು 2018ರ ಆಗಸ್ಟ್‌ 29ರಂದು ಬಂಧಿಸಲಾಗಿತ್ತು. ನಂತರ ಆತನ ಬಿಡುಗಡೆಯಾಗಿದ್ದ. ಅದಾದ ಬಳಿಕ ಮಣಿಪಾಲದಲ್ಲಿ  ಕೆಲ ಸಮಯ ಇದ್ದು ನಂತರ ಮಂಗಳೂರಿನಲ್ಲಿ  ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿದ್ದ. ಹೋಟೆಲ್ ನಲ್ಲಿ ಸಪ್ಲೈ ಕೆಲಸಕ್ಕೆ ಬಂದವನಿಗೆ ಓದಿನ ಅರ್ಹತೆ ನೋಡಿ ಬಿಲ್ ಮಾಡುವ ಕೆಲಸ ನೀಡಿದ್ದರು. ಹೆಚ್ಚು ಮಾತನಾಡದ ಆದಿತ್ಯ ರಾವ್ ತನ್ನ ಪಾಡಿಗೆ ಇದ್ದ ಎಂದು ತಿಳಿದುಬಂದಿದೆ. ಇದೀಗ ಬಾಂಬ್ ಇರಿಸಿ ಪೊಲೀಸ್ ಅತಿಥಿಯಾಗಿದ್ದಾನೆ.

ಬಾಂಬ್ ತಯಾರು ಮಾಡಿದ್ದು ಹಾಗೂ ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳ ಪ್ರಕಾರ ಈತ ಯೂಟೂಬ್ ನೋಡಿ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದು, ಆನ್ ಲೈನ್ ಮೂಲಕವೇ ಅದಕ್ಕೆ ಬೇಕಾದ ವಸ್ತುಗಳನ್ನು ತರಿಸಿದ್ದ ಇದಕ್ಕಾಗಿ ಹಲವು ಬಾರಿ ಪ್ರಯತ್ನ ಮಾಡಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಇರಿಸಿದ ಬಳಿಕ ಮಾರುವೇಷದಲ್ಲಿ  ಬೆಂಗಳೂರಿಗೆ ತೆರಳಿದ್ದ ಬಳಿಕ ಭಯಗೊಂಡು ಮಂಗಳವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದ.  ಮನೆಯವರೊಂದಿಗೆ ಹೆಚ್ಚು ಸಂಪರ್ಕವಿಲ್ಲದೆ ಆದಿತ್ಯ ತನ್ನ ಪಾಡಿಗೆ ಇದ್ದ. ಉದ್ಯೋಗದ ಹುಡುಕಾಟ ಎಂದು ಮನೆಯಲ್ಲಿ  ಹೇಳುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

1 hour ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

6 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

12 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

2 days ago